ಬೆಂಗಳೂರು, ಏಪ್ರಿಲ್ 23: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಎರಡು ವಾರಗಳು ಮಾತ್ರ ಬಾಕಿ ಇದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾನುವಾರ ಬಸವ ಜಯಂತಿಯ ಸಂದರ್ಭದಲ್ಲಿ ಸಮಾಜ ಸುಧಾರಕ ಬಸವಣ್ಣ ಅವರ ಪ್ರತಿಮೆಗೆ ನಮಸ್ಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಈ ಬಾರಿ, ಜನರು ಸತ್ಯ, ನ್ಯಾಯ ಮತ್ತು ಸಮಾನತೆಯನ್ನು ಆರ್ಶೀವಾದಿಸುತ್ತಾರೆ, ಮತ್ತು ಬಿಜೆಪಿ ಆ ಹಾದಿಯಲ್ಲಿ ಸಾಗುತ್ತಿದೆ. ಆದ್ದರಿಂದ, ಬಿಜೆಪಿಯ ಗೆಲುವು ನಿಶ್ಚಿತ” ಎಂದು ಹೇಳಿದರು.
ನವ ಕರ್ನಾಟಕ ನಿರ್ಮಾಣ ಮಾಡುವುದು ಬಿಜೆಪಿಯ ಬದ್ಧತೆಯಾಗಿದೆ ಎಂದರು.
“ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನರು ತಮ್ಮ ತೀರ್ಪನ್ನು ನೀಡುತ್ತಾರೆ ಮತ್ತು ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಬಿಜೆಪಿ ತನ್ನ ತತ್ವಗಳು ಮತ್ತು ಸಿದ್ಧಾಂತಗಳನ್ನು ಜನರ ಮುಂದೆ ಇಡುವ ಮೂಲಕ ಪ್ರಯತ್ನಿಸುತ್ತಿದೆ” ಎಂದು ಬೊಮ್ಮಾಯಿ ಹೇಳಿದರು.
12 ನೇ ಶತಮಾನದ ಸುಧಾರಕ ಬಸವಣ್ಣನವರು ಸಮಾನತೆಯ ಸಂಕೇತವಾಗಿದ್ದರು ಮತ್ತು ಸಮಾನತೆಯ ಪರಿಕಲ್ಪನೆಯನ್ನು ತಂದ ಕ್ರಾಂತಿಕಾರಿ ವ್ಯಕ್ತಿ ಎಂದು ಮುಖ್ಯಮಂತ್ರಿ ಸ್ಮರಿಸಿದರು.
ನಮ್ಮ ಸರ್ಕಾರವು ಬಸವಣ್ಣನವರ ಸಿದ್ಧಾಂತ ಮತ್ತು ತತ್ವಗಳ ಮೇಲೆ ಕಾರ್ಯನಿರ್ವಹಿಸುತ್ತಿದೆ ಮತ್ತು ತುಳಿತಕ್ಕೊಳಗಾದ ವರ್ಗಗಳಿಗೆ ಎಲ್ಲಾ ಗೌರವವನ್ನು ನೀಡುವ ಮೂಲಕ ಮತ್ತು ಅವರ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗಾಗಿ ಬಸವ ಪಥದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ. ಕರ್ನಾಟಕದ ಜನತೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು