ಬೆಂಗಳೂರು ; : ಬಿಜೆಪಿ ಪಕ್ಷ ತೊರೆದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ತಮ್ಮ ಕ್ಷೇತ್ರಗಳಲ್ಲಿ ಪ್ರಭಾವ ತಗ್ಗಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರನ್ನು ಅಖಾಡಕ್ಕೆ ಇಳಿಸಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಆ ಇಬ್ಬರು ಲಿಂಗಾಯತ ನಾಯಕರು ಮತದಾರರ ಮೇಲೆ ಪ್ರಭಾವ ಬೀರುವುದನ್ನು ತಪ್ಪಿಸಲು ಯಡಿಯೂರಪ್ಪ ಅವರಿಂದ ಮಾತ್ರ ಸಾಧ್ಯ ಎಂಬುದನ್ನು ತಕ್ಷಣ ಅರಿತುಕೊಂಡಿರುವ ಅಮಿತ್ ಶಾ, ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಹಾಗಾಗಿ ಉತ್ತರ ಕರ್ನಾಟಕ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಅವರನ್ನು ಹೆಚ್ಚು ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಆರೋಗ್ಯದ ದೃಷ್ಠಿಯಿಂದ ಉತ್ತರ ಕರ್ನಾಟಕದ ಸುಡುವ ಬಿಸಿಲನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣದ ಆಯಾಸ ಕಡಿಮೆ ಮಾಡಿಕೊಳ್ಳಲು ಹೆಲಿಕಾಪ್ಟರ್ ಬಳಸುವಂತೆ ಬಿಜೆಪಿಯ ಹಿರಿಯ ಮುಖಂಡರಿಗೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರಿಗೆ ಹೆಲಿಕಾಪ್ಟರ್ ನೀಡಲಾಗುತ್ತಿದ್ದು, ವಿಧಾನಸಭೆ ಚುನಾವಣೆ ಮುನ್ನಾ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ಹೆಚ್ಚು ಹೆಚ್ಚು ಸ್ಥಳಗಳಲ್ಲಿ ಸಂಚರಿಸಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣಾ ಪ್ರಚಾರಕ್ಕೆ ಪ್ರತ್ಯೇಕ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿರುವುದರಿಂದ ಯಡಿಯೂರಪ್ಪ ಅವರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗಿದೆ. ಬಿಎಸ್ ಯಡಿಯೂರಪ್ಪ ಅವರು ಪಕ್ಷ ಒದಗಿಸಿರುವ ಹೆಲಿಕಾಪ್ಟರ್ನಲ್ಲಿ ಎಲ್ಲಾ ಪೂರ್ವ ನಿಗದಿತ ಪ್ರಚಾರದಲ್ಲಿ ಪ್ರಚಾರ ನಡೆಸಲಿದ್ದಾರೆ. . ಬಹುಪಾಲು. ಮೇ 1ರ ನಂತರವೇ ಯಡಿಯೂರಪ್ಪ ತಮ್ಮ ಕ್ಷೇತ್ರಕ್ಕೆ ಬರಬೇಕು ಎಂದು ಬಿಜೆಪಿ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. ಮೇ 1ರ ನಂತರ ಯಡಿಯೂರಪ್ಪ ಪ್ರಚಾರ ನಡೆಸಿದರೆ ಪ್ರತಿಪಕ್ಷ ಕಾಂಗ್ರೆಸ್ ಸಿನಿಮಾ ನಟ ಅಥವಾ ರಾಷ್ಟ್ರಮಟ್ಟದ ನಾಯಕರನ್ನು ಪ್ರಚಾರಕ್ಕೆ ಕರೆತಂದು ತಂತ್ರ ರೂಪಿಸುತ್ತದೆ ಎಂಬ ಆತಂಕದಲ್ಲಿದ್ದಾರೆ.
ಮೇ 1ರ ನಂತರವೇ ಬರಬೇಕು ಎಂಬ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳ ಒತ್ತಾಯದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಮೇ.1ರ ನಂತರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ, ಚಿತ್ರದುರ್ಗ ಸೇರಿದಂತೆ ನಾನಾ ಜಿಲ್ಲೆಗಳ ಅಭ್ಯರ್ಥಿಗಳಿಂದ ಯಡಿಯೂರಪ್ಪಗೆ ಬೇಡಿಕೆ ಹೆಚ್ಚಿದೆ. . ಹೀಗಾಗಿ ಯಡಿಯೂರಪ್ಪ ಚುನಾವಣೆಯ ವಾರದಲ್ಲಿಯೇ ಫುಲ್ ಬ್ಯುಸಿಯಾಗಲಿದ್ದಾರೆ. ಚುನಾವಣೆಯ ಅಂತಿಮ ದಿನಗಳಲ್ಲಿ ಯಡಿಯೂರಪ್ಪ ಅವರಿಗೆ ಬೇಡಿಕೆ ಹೆಚ್ಚಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ