ಮಂಗಳೂರು: ಜಿಲ್ಲೆಯಲ್ಲಿ ಸುಮಾರು ದಿನಗಳಿಂದ ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಯು ವರುಣನ ಕೃಪೆಯಿಂದ ಕೊಂಚ ತಂಪಾಗಿದೆ.
ಜಿಲ್ಲೆಯ ಹಲವು ಕಡೆ ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ಜನರಿಗೆ ಸೆಕೆಯಿಂದ ಸ್ವಲ್ಪ ರಿಲೀಫ್ ಸಿಕ್ಕಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಳ, ಬಿ. ಸಿ. ರೋಡ್ ಹಾಗೂ ಸುಳ್ಯದ ಹಲವೆಡೆ ಬುಧವಾರ ಸಂಜೆ ಧಾರಾಕಾರ ಮಳೆಯಾಗಿದೆ. ಇನ್ನೂ ಸುಳ್ಯ ತಾಲ್ಲೂಕಿನ ಸಂಪಾಜೆ, ಅರಂತೋಡು, ದೊಡ್ಡತೋಟ ಭಾಗಗಳಲ್ಲಿ ಗಾಳಿ ಮಳೆಗೆ ಮರ ಬಿದ್ದು ಹಾನಿ ಉಂಟಾಗಿದ್ದು ವಿದ್ಯುತ್ ಕಡಿತಗೊಂಡಿದೆ.