ಶನಿವಾರ ಸಂಜೆ ನಡೆಯಬೇಕಿದ್ದ ರೋಡ್ ಶೋ, ಸಂಜೆ ಬದಲು ಶನಿವಾರ ಬೆಳಗ್ಗೆ ಮತ್ತು ಭಾನುವಾರ ಬೆಳಗ್ಗೆ ಎರಡು ದಿನ ರೋಡ್ ಶೋ ನಡೆಯಲಿದೆ. ಸಂಜೆ ಮಳೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ ರೋಡ್ ಶೋ ನಡೆಯಲಿದೆ. ಪ್ರಧಾನಿ ಮೋದಿ ಮೇ 6 ರಂದು ರಾಜಧಾನಿ ಬೆಂಗಳೂರಿನ 17 ಕ್ಷೇತ್ರಗಳಲ್ಲಿ ಶನಿವಾರ ಮತ್ತು ಭಾನುವಾರ ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಒಟ್ಟು 36.6 ಕಿ.ಮೀ. ದೂರ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಭಾರತ ಮೂಲದ ಅಜಯ್ ಬಂಗಾ ಅವರು ವಿಶ್ವಬ್ಯಾಂಕ್ ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಅಜಯ್ ಬಂಗಾ ಅವರು ಜೂನ್ 2 2023 ರಿಂದ 5 ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿ ಇರಲಿದ್ದಾರೆ. ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಬಂಗಾ ಅವರ ಹೆಸರು ಸೂಚಿಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಈ ಹಿಂದೆ ಪ್ರಕಟಿಸಿದ್ದರು.
ಪ್ರಸ್ತುತ ವಿಶ್ವಬ್ಯಾಂಕ್ ಅಧ್ಯಕ್ಷರಾಗಿರುವ ಡೇವಿಡ್ ಮಾಲ್ಪಾಸ್ ಅವರ ಅಧಿಕಾರಾವಧಿ ಮುಂದಿನ ತಿಂಗಳ ಮೊದಲ ವಾರ ಕೊನೆಯಾಗಲಿದೆ.
ಅಜಯ್ ಬಂಗಾ ಅವರು ಮೂಲತಃ ಭಾರತದವರಾಗಿದ್ದು, ಅವರು ತಮ್ಮ ಪದವಿ ಶಿಕ್ಷಣವನ್ನು ದೆಹಲಿಯಲ್ಲಿ ಹಾಗೂ ಎಂಬಿಎ ಪದವಿಯನ್ನು ಅಹಮದಾಬಾದ್ ನಲ್ಲಿ ಪೂರ್ಣಗೊಳಿಸಿದ್ದಾರೆ. ಇದಲ್ಲದೆ ಬಂಗಾ ಅವರಿಗೆ ಭಾರತ ಸರ್ಕಾರ 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ಇನ್ನು ಬ್ರಿಟನ್ ನಲ್ಲಿ ಮೂರನೇ ಚಾರ್ಲ್ಸ್ ಅವರ ಪಟ್ಟಾಭಿಷೇಕ ಸಂಭ್ರಮ ಜೋರಾಗಿದೆ. ಇದೇ ಶನಿವಾರ ರಾಜ ಚಾರ್ಲ್ಸ್ ರಿಗೆ ಕಿರೀಟ ತೊಡಿಸಿ ಪಟ್ಟಾಭಿಷೇಕ ಮಾಡಲು ಬ್ರಿಟನ್ ಸಜ್ಜಾಗುತ್ತಿದೆ.
70 ವರ್ಷಗಲ್ಲೇ ಅತ್ಯಂತ ಅದ್ದೂರಿಯಾಗಿ ಸೇನಾ ಮೆರವಣಿಗೆ ನಡೆಯಲಿದ್ದು, ರಾಜರ ಮೆರವಣಿಗೆಗೆ ಚಿನ್ನದ ಸಾರೋಟು ಸಿದ್ದಗೊಂಡಿದೆ. ಅಧಿಕಾರ ಹೊತ್ತಿರುವ ರಾಜ ಚಾರ್ಲ್ಸ್ ರಿಗೆ ಧರ್ಮ ಗುರುಗಳು ದಂಡ ಮತ್ತಿತರ ವಸ್ತುಗಳನ್ನು ಹಸ್ತಾಂತರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀತದ ಕಿಸ್ತ್ವಾಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗುರುವಾರ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಹಾಗೂ ಒಬ್ಬರು ತಾಂತ್ರಿಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಪ್ರಮಾಣದ ಹಿಮದಿಂದಾಗಿ ಕಾರ್ಯಾಚರಣೆಗೆ ನಿಯೋಜನೆಗೊಂಡಿದ್ದ ಹೆಲಿಕಾಪ್ಟರ್ ಜಿಲ್ಲಾ ಕೇಂದ್ರದಿಂದ ಸಂಪರ್ಕ ಕಳೆದುಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಪೈಲಟ್ ಗಳು ಕಿಸ್ತ್ ವಾಡಾ ಪ್ರದೇಶದಲ್ಲಿನ ಮರುನಾ ನದಿ ದಂಡೆಯ ಮೇಲೆ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿ ತಿಳಿಸಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಧಂಪುರದಲ್ಲಿನ ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದಲ್ಲಿ ಕಾವೇರುತ್ತಿರುವ ಚುನಾವಣಾ ಕಣದ ನಡುವೆ ಶನಿವಾರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅನಾರೋಗ್ಯದ ಕಾರಣದಿಂದ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದ ಸೋನಿಯಾ ಗಾಂಧಿ ಅವರು ಇದೇ ಮೊದಲ ಚುನಾವಣಾ ಕಣದಲ್ಲಿರುವ ರಾಜ್ಯದಲ್ಲಿ ಸಭೆ ನಡೆಸುತ್ತಿದ್ದಾರೆ. 2023ರ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂದಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ