ಹುಬ್ಬಳ್ಳಿ: ನಗರದ ವಿಜಯನಗರ ಆಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹನುಮಾನ್ ಚಾಲಿಸ್ ಪಠಣ ಮಾಡಿದರು.
ಮುಖ್ಯಮಂತ್ರಿಗಳಿಗೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ ಸೇರಿದಂತೆ ಸ್ಥಳೀಯ ನಿವಾಸಿಗಳು ಜೊತೆಯಾದರು.
ಇದೇ ವೇಳೆ ಆಂಜನೇಯನಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸಿದರು.
ತಪ್ಪು ಮಾಡಿದವರ ಮೇಲೆ ಐ.ಟಿ ದಾಳಿಯಾಗುವುದು ಸಹಜ
ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮನೆಯ ಮೇಲೆ ಐಟಿ ದಾಳಿ ನಡೆದಿರುವ ಸಂಬಂಧ ಮಾತನಾಡಿದ ಅವರು, ತಪ್ಪು ಮಾಡಿದವರ ಮೇಲೆ ದಾಳಿಯಾಗುವುದು ಸಹಜ ಎಂದರು