ಬೆಂಗಳೂರು: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನದ ಬಳಿಕ ಪಾಕಿಸ್ತಾನದಲ್ಲಿ ಹಿಂಸಾಚಾರ ತಾರಕಕ್ಕೇರಿದೆ.
ಹಲವೆಡೆ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದ್ದು, ಸೇನಾ ವಾಹನಗಳಿಗೆ ಕಲ್ಲು ಎಸೆದು, ಸೇನಾ ಪ್ರಧಾನ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ.
ಸದ್ಯ ಇಮ್ರಾನ್ ಖಾನ್ ಪಕ್ಷ ಪಿಟಿಐ ಪ್ರತಿಭಟನೆಗೆ ಕರೆ ನೀಡಿದ್ದು, ಎಲ್ಲೆಡೆ ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಸಿಗದಂತಾಗಿದ್ದು, ತುರ್ತು ಪರಿಸ್ಥಿತಿ ನಿರ್ಮಾಣಗೊಂಡಿದೆ.
ಭ್ರಸ್ಟಾಚಾರ ಹಾಗೂ ಹಲವು ಪ್ರಕರಣಗಳಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಇಮ್ರಾನ್ ಖಾನ್ ರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿರುವ ಇಮ್ರಾನ್ ಖಾನ್ ಬೆಂಬಲಿಗರು ಸೇನಾ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಿ ಧ್ವಂಸಗೊಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಸೇನೆಯೇ ವಿರುದ್ಧವೇ ದಂಗೆ ಎದ್ದಿದ್ದು, ಪರಿಸ್ಥಿತಿ ಕೈಮೀರಿದೆ.