ಶಿಗ್ಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಪುತ್ರ ಭರತ್, ಪುತ್ರಿ ಅದಿತಿ ಅವರು ಇಂದು ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಸಂಸದ ರಾಘವೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಡನೆ ಶಿಕಾರಿಪುರದಲ್ಲಿ ಮತದಾನ ಮಾಡಿದರು
ಇನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯತ್ ನ ಬೂತ್ ನಂಬರ್ 165 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ.
ಇನ್ನು ಚಿಕ್ಕಮಗಳೂರಿನಲ್ಲಿ ಮೊದಲ ಬಾರಿ ಮತಚಲಾಯಿಸುವವರಿಗೆ ಅದ್ಭುತ ಸ್ವಾಗತ ಕೋರಿದರು.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅರಬಿಂದೋ ವಿದ್ಯಾಮಂದಿರ ವಿಕಲ ಸ್ಹೇಹಿ ಮತಗಟ್ಟೆ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯವರೆಗೆ ಶೇ. 15 ರಷ್ಟು ಮತದಾನ ನಡೆದಿದೆ.
162 ಶಿವಾಜಿನಗರ ಬೂತ್ ಸಂಖ್ಯೆ 87 ಹಫೀಜಿಯಾ ಬಿಬಿಎಂಪಿ ಪ್ರೌಢ ಶಾಲೆ ಮತ್ತು ಹೈಸ್ಕೂಲ್ ಒಟ್ಟು ಮತಗಳು 1269. ಬೆಳಿಗ್ಗೆ 8.45ರ ವೇಳೆಗೆ ಚಲಾವಣೆಯಾದ ಮತಗಳು 66 ಶೇಕಡ ಮತದಾನ.
ನಟ, ರಾಜ್ಯಸಭಾ ಸಂಸದ ಜಗ್ಗೇಶ ಕುಟುಂಬಸ್ಥರೋದಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಎಂಇಎಸ್ ಕಾಲೇಜಿನಲ್ಲಿ ಮತ ಚಲಾಯಿಸಿದರು.
ಇನ್ನು ಕೆಲವು ಮತಗಟ್ಟಗಳಲ್ಲಿ ಮೊದಲ ಬಾರಿ ಮತದಾನ ಮಾಡಿದವರಿಗೆ ಇ-ಸರ್ಟೀಫಿಕೆಟ ನೀಡಿ ಪ್ರೋತ್ಸಾಹಿಸಲಾಯಿತು.
ಕಂದಾಯ ಸಚಿವ ಆರ್. ಅಶೋಕ ತಮ್ಮ ಪತ್ನಿಯೊಡನೆ ಪದ್ಮನಾಭನಗರದಲ್ಲಿ ಮತದಾನ ಮಾಡಿದರು.
ಇಂದು ರಾಜ್ಯದಲ್ಲಿ ಮಧುಮಗಳೊಬ್ಬಳು ಮದುವೆಯ ಮಧ್ಯೆ ಮತಗಟ್ಟೆಗೆ ಬಂದು ಮತ ಚಲಾಯಿಸಿದಳು.