ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಭೂಪಸಂದ್ರ ಮುಖ್ಯ ರಸ್ತೆಯಲ್ಲಿರುವ ವಿದ್ಯಾಸಾಗರ ಪ್ರಿ ಸ್ಕೂಲ್ ನಲ್ಲಿ ನ ಬೂತ್ ನಲ್ಲಿ ಮೊದಲಿಗರಾಗಿ ಮತ ಚಲಾಯಿಸಿದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳು ಮತ ಚಲಾವಣೆ ಮಾಡಿ ಮಾತನಾಡಿದ ಆವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಈ ಹಬ್ಬದಲ್ಲಿ ಮತದಾನ ಮಾಡುವ ಮೂಲಕ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಮತ್ತು ಈ ಹಬ್ಬವನ್ನ ಆಚರಿಸಬೇಕು ಎಂದು ಕರೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಹಳಷ್ಟು ಯುವ ಮತದಾರರು ಮತ ಚಲಾವಣೆ ಮಾಡಲಿದ್ದೀರಿ ಅಧಿಕಾರಿಗಳು ಮತ ಚಲಾವಣೆಯ ಅನುಭವವನ್ನು ಬಹಳಷ್ಟು ಸುಲಲಿತಗೊಳಿಸಿದ್ದಾರೆ ಎಲ್ಲರೂ ಮತದಾನ ಮಾಡಬೇಕು ಎಂದು ಅದರಲ್ಲೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಕರೆ ನೀಡಿದರು