ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇದರ ಬೆನ್ನಲ್ಲೇ ಯಾವುದೇ ಒಂದು ಪಕ್ಷವು ಬಹುಮತ ಸಾಬೀತುಪಡಿಸದೇ ಸಮ್ಮಿಶ್ರ ಸರ್ಕಾರ ರಚನೆಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದಲ್ಲಿ ಈ ಹಿಂದೆ ಕೂಡ ಹಲವಾರು ಬಾರಿ ಸಮ್ಮಿಶ್ರ ಸರ್ಕಾರ ರಚನೆಯಾಗಿತ್ತು.
1983ರಲ್ಲಿ ಭಾಗಶಃ ಸಮ್ಮಿಶ್ರ ಸರ್ಕಾರ:
1983ರ ಚುನಾವಣೆಯಲ್ಲಿ ಕಾಂಗ್ರೆಸ್ 82 ಸ್ಥಾನಘಲನ್ನು ಮಾತ್ರ ಗೆದ್ದಿತ್ತು ಆದರೆ ಜನತಾ ಪಕ್ಷ 95 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಗ ಎಚ್ ಡಿ ದೇವೇಗೌಡ ಮತ್ತು ಎಸ್ ಬಂಗಾರಪ್ಪ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಪ್ರಾರಂಭವಾಗಿತ್ತು. ನಂತರ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಸ್ಥಾನವನ್ನು ಪಡೆದುಕೊಂಡರು. ಜನತಾ ಪಕ್ಷ ಸರ್ಕಾರ ರಚಿಸಲು 18 ಸ್ಥಾನ ಗೆದ್ದಿದ್ದ ಬಿಜೆಪಿ ಬಾಹ್ಯ ಬೆಂಬಲವನ್ನು ನೀಡಿತ್ತು.
2004ರಲ್ಲಿ ಮೊದಲ ಸಮ್ಮಿಶ್ರ ಸರ್ಕಾರ:
2004ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 79 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ರೂಪುಗೊಂಡಿತು. ಆದರೂ 65 ಸ್ಥಾನಗೆದ್ದ ಕಾಂಗ್ರೆಸ್ ಮತ್ತು 58 ಸ್ಥಾನ ಗೆದ್ದ ಜೆಡಿಎಸ್ ಪಕ್ಷಗಳು ಸೇರಿಕೊಂಡು ಸಮ್ಮಿಶ್ರ ಸರ್ಕಾರವನ್ನು ರಚಿಸಿದವು. ಆದರೆ ಈ ಸರ್ಕಾರ ಹೆಚ್ಚು ಕಾಲ ಉಳಿಯಲಿಲ್ಲ ಜೆಡಿಎಸ್ 47 ಶಾಸಕರು ಜೊತೆ ಎಚ್ ಡಿ ಕುಮಾರ್ ಸ್ವಾಮಿ ಪಕ್ಷದಿಂದ ಹೊರನಡೆಯುವ ಮೂಲಕ ಸಮ್ಮಿಶ್ರ ಸರ್ಕಾರ ಪತನಗೊಂಡಿತು.
2006ರಲ್ಲಿ ಸಮ್ಮಿಶ್ರ ಸರ್ಕಾರ:
2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸೇರಿ ಸಮ್ಮಿಶ್ರ ಸರ್ಕಾರ ರಚಿಸಿದವು. ತಲಾ 20 ತಿಂಗಳುಗಳಂತೆ ಕುಮಾರಸ್ವಾಮಿ ಮತ್ತು ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಪಡೆಯಬೇಕಿತ್ತು. ಆದರೆ ಒಪ್ಪಂದಂತೆ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲಿಲ್ಲ. ನಂತರ ಮಾತುಕತೆ ನಡೆದು ಯಡಿಯೂರಪ್ಪ ಅಧಿಕಾರ ಪಡೆದರು ಆದರೆ ಜೆಡಿಎಸ್ ಬೆಂಬಲವನ್ನು ಹಿಂಪಡೆಯಿತು ಸಮ್ಮಿಶ್ರ ಸರ್ಕಾರ ಪತನವಾಗಿ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು.
2008ರ ಸಮ್ಮಿಶ್ರ ಸರ್ಕಾರ:
2008ರಲ್ಲಿಯ ಚುನಾವಣೆಯಲ್ಲಿ110 ಸ್ಥಾನವನ್ನು ಗೆದ್ದುಕೊಂಡ ಕೊಂಡರು ಕೂಡ ಅಧಿಕಾರ ನಡೆಸಲು ಬೇಕಾದಷ್ಟು ಸ್ಥಾನವಿರಲಿಲ್ಲ ಆಗ ಪಕ್ಷೇತರ ಅಭ್ಯರ್ಥಿಗಳನ್ನು ಸೇರಿಸಿಕೊಂಡು ನಂತರ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರನ್ನು ಅಪರೇಶನ್ ಕಮಲ ಮಾಡಿ ಸರ್ಕಾರ ರಚಿಸಿದರು. ನಂತರ ನಡೆದ ಘಟನೆಗಳಿಂದಾಗಿ ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂತು.
20018ರ ಸಮ್ಮಿಶ್ರ ಸರ್ಕಾರ:
2018ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನವನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ರೂಪುಗೊಂಡಿತು. ಕಾಂಗ್ರೆಸ್ 40 ಸ್ಥಾನವನ್ನು ಜೆಡಿಎಸ್ 37 ಸ್ಥಾನವನ್ನುಗೆದ್ದುಕೊಂಡಿತ್ತು. ಬಿಜೆಪಿ ಬಹುಮತವಿಲ್ಲದೇ ಇದ್ದರೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದರು. ಆದರೆ ಬಹುಮತ ಸಾಬೀತು ಮಾಡಲಾಗದೇ ರಾಜೀನಾಮೆ ಕೊಡಬೇಕಾಯಿತು. ಕಾಂಗ್ರೆಸ್ ಜೆಡಿಎಸ್ ಪಕ್ಷೇತರರು ಸೇರಿ ಸಮ್ಮಿಶ್ರ ಸರ್ಕಾರ ರಚಿಸಿದರು ಆದರೆ ಬಿಜೆಪಿ ಅಪರೇಶನ್ ಕಮಲ ಮಾಡಿ ಅಧಿಕಾರ ಪಡೆದುಕೊಂಡು ಯಡಿಯೂರಪ್ಪ ಮುಖ್ಯಮಂತ್ರಿಯಾದರೂ ಒಂದೂವರೆ ವರ್ಷದ ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.