ಬೆಂಗಳೂರು: ಬಹುನಿರೀಕ್ಷಿತ ಬೈಯಪ್ಪನಹಳ್ಳಿ – ಕೆ.ಆರ್.ಪುರ ನಮ್ಮ ಮೆಟ್ರೋ ವಿಭಾಗದ 2 ಕಿ.ಮೀ. ಮಾರ್ಗವು ಜುಲೈ.15ರೊಳಗೆ ಸಂಚಾರಕ್ಕೆ ಮುಕ್ತವಾಗಲಿದೆ.
ಬೆನ್ನಿಗಾನಹಳ್ಳಿ ಬಳಿ ಬೆಂಗಳೂರು-ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ತೆರೆದ ವೆಬ್ ಗರ್ಡರ್ ಅಳವಡಿಕೆ ಕೆಲಸ ಪೂರ್ಣಗೊಳ್ಳದ ಕಾರಣ ಸದ್ಯ ಬೈಯಪ್ಪನಹಳ್ಳಿ-ಕೆ. ಆರ್. ಪುರ ಮಾರ್ಗ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಜುಲೈ 15ರ ಒಳಗಾಗಿ ಮಾರ್ಗವು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಸದ್ಯ ಬೈಯಪ್ಪನಹಳ್ಳಿ ಮತ್ತು ಜ್ಯೋತಿಪುರ (ಬೆನ್ನಿಗಾನಹಳ್ಳಿ) ಎರಡೂ ಕಡೆಯಿಂದ ಟ್ರ್ಯಾಕ್ ಅಳವಡಿಕೆ ಪ್ರಗತಿಯಲ್ಲಿದೆ ಮತ್ತು ಈ ತಿಂಗಳ ಅಂತ್ಯದ ವೇಳೆಗೆ ಇದು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಟ್ರಾಕ್ಷನ್, ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕೆಲಸಗಳನ್ನು ಜೂನ್ 15 ರೊಳಗೆ ಪೂರ್ಣಗೊಳಿಸಲಾಗುವುದು. ಬಳಿಕ ಪ್ರಾಯೋಗಿಕ ಸಂಚಾರ ಆರಂಭಗೊಳ್ಳಳಿದೆ. ದೂರವು ಕಡಿಮೆ ಇರುವುದರಿಂದ ಪ್ರಾಯೋಗಿಕ ಸಂಚಾರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬಹುದು.
ಇಂದಿನ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ಪ್ಲೇ ಆಫ್ ಗೆ ಆಯ್ಕೆಯಾಗಿರುವ ಮೊದಲ ತಂಡ ಗುಜರಾತ್ ಟೈಟಾನ್ಸ್ ಪಡೆ ಹೊರಹೊಮ್ಮಿದೆ. ಹಾರ್ದಿಕ್ ಪಾಂಡ್ಯ ಅವರ ತಂಡ ಈವರೆಗೆ 13 ಪಂದ್ಯಗಳನ್ನು ಆಡಿದ್ದು, ಅವುಗಳಲ್ಲಿ 9 ರಲ್ಲಿ ಜಯ ಸಾಧಿಸಿದೆ. ಈ ಮೂಲಕ 18 ಅಂಕಗಳೊಂದಿಗೆ ನೇರವಾಗಿ ಪ್ಲೇ ಆಫ್ ಪ್ರವೇಶಿಸಿದೆ.
ಈ ಪಂದ್ಯದಲ್ಲಿ ಸೋಲುಂಡ ಸನ್ರೈಸರ್ಸ್ ತಂಡ ಪ್ಲೇ ಆಫ್ ನಿಂದ ಹೊರಬಿದ್ದಿದೆ. ಒಟ್ಟು 12 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದ್ದು, ಕೊನೆಯ ಪಂದ್ಯದಲ್ಲಿ ಗೆದ್ದರೂ ಕೂಡ ಪ್ಲೇ ಆಫ್ ಗೆ ಹೋಗಲು ಸಾಧ್ಯವಾಗುವುದಿಲ್ಲ. ಈಗಾಗಲೇ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ (18 ಅಂಕಗಳು), ಸಿಎಸ್ ಕೆ (15 ಅಂಕಗಳು), ಮುಂಬೈ ಇಂಡಿಯನ್ಸ್ (14 ಅಂಕಗಳು) ಹಾಗೂ ಲಕ್ನೋ ಸೂಪರ್ ಜೈಂಟ್ಸ್ 13 ಅಂಕಗಳನ್ನು ಹೊಂದಿವೆ. ಇನ್ನು 2ನೇ, 3ನೇ ಹಾಗೂ 4ನೇ ಸ್ಥಾನಕ್ಕಾಗಿ 7 ತಂಡಗಳ ನಡುವೆ ಪೈಪೋಟಿ ಇದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ ಎಂದು ಮಾಹಿತಿ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ತಮ್ಮ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಕೊಲೆ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಇನ್ನು ಈ ಬಗ್ಗೆ ಸಚಿವರ ಕಚೇರಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಸಿನಿಮಾವನ್ನು ಯಾಕೆ ನಿಷೇಧಿಸಲಾಗಿದೆ ಎಂಬುದರ ಬಗ್ಗೆ ಉತ್ತರಿಸಲು ಸುಪ್ರೀಂ ಕೋರ್ಟ್ ಎರಡೂ ರಾಜ್ಯಗಳಿಗೂ ನೋಟೀಸ್ ನೀಡಿತ್ತು.
ಈ ನೋಟಿಸ್ ಗೆ ಉತ್ತರಿಸಿದ ತಮಿಳುನಾಡು ಸರ್ಕಾರ, ದಿ ಕೇರಳ ಸ್ಟೋರಿ ಬಿಡುಗಡೆಯಾಗಿ ಎರಡು ದಿನವಾದರೂ ಸಿನಿಮಾ ನೋಡಲು ಯಾರು ಬರುತ್ತಿಲ್ಲ ಎಂಬ ಕಾರಣಕ್ಕೆ ಥಿಯೇಟರ್ ಮಾಲೀಕರು ಈ ಕ್ರಮಕ್ಕೆ ಬಂದಿದ್ದಾರೆ ಎಂದಿದೆ. ಇನ್ನು ಮಲ್ಟಿಪ್ಲೆಕ್ಸ್ ನ ಮಾಲೀಕರು ಮೇ.7 ರಿಂದ ಚಿತ್ರ ಪ್ರದರ್ಶನ ನಿಲ್ಲಿಸುವ ನಿರ್ಧಾರ ಮಾಡಿದ್ದಾರೆ. ಚಿತ್ರದಲ್ಲಿ ಯಾವುದೇ ಪ್ರಸಿದ್ಧ ನಟ ನಟಿಯರು ಇಲ್ಲ, ಕಳಪೆ ಪ್ರದರ್ಶನ ಮತ್ತು ಸಿನಿಮಾ ವೀಕ್ಷಿಸಲು ಜನರೇ ಇಲ್ಲ ಎಂದು ಸರ್ಕಾರ ಹೇಳಿದೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 4 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಹತ್ ಜಿಲ್ಲೆಯಲ್ಲಿನ ದರ್ರಾ ಆದಮ್ ಖೇಲ್ ಬುಡಕಟ್ಟು ಪ್ರದೇಶದಲ್ಲಿನ ಕಲ್ಲಿದ್ದಲು ಗಣಿಯ ಗಡಿರೇಖೆ ವಿಷಯದಲ್ಲಿ ಘರ್ಷಣೆ ಉಂಟಾಗಿದೆ. ದೀರ್ಘಕಾಲದ ವಿವಾದದಿಂದ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ಜಿರ್ಗಾ, ಸ್ಥಳೀಯ ಬುಡಕಟ್ಟು ನ್ಯಾಯಾಲಯ ಹಲವು ಸಭೆ ನಡೆಸಿದ್ದರೂ ವಿಫಲವಾಗಿತ್ತು.
ನಿನ್ನೆ ಮುಂಜಾನೆ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುವಾಗ ಗುಂಪುಗಳು ಪರಸ್ಪರ ಮುಖಾಮುಖಿಯಾಗಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಕೆಲವು ಆರೋಪಿಗಳು ಗುಂಡು ಹಾರಿಸಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.