ಭಾರತದಲ್ಲಿ ಪ್ರತಿವರ್ಷ ಮೇ 21ನ್ನು ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತದೆ. ರಾಷ್ಟ್ರೀಯ ಸಾಮರಸ್ಯವನ್ನು ಉತ್ತೇಜಿಸುವ, ಭಯೋತ್ಪಾದನಾ ಚಟುವಟಿಕೆಗಳನ್ನು ಕಡಿಮೆ ಮಾಡುವ ಮತ್ತು ಎಲ್ಲಾ ಜಾತಿ ಪಂಥಗಳ ಜನರ ನಡುವೆ ಏಕತೆಯನ್ನು ಬಿಂಬಿಸುವ ಉದ್ದೇಶದಿಂದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವನ್ನುಆಚರಿಸಲಾಗುತ್ತದೆ.
ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಮೂಲಕ, ಭಯೋತ್ಪಾದನೆಯು ದೇಶದ ಅಭಿವೃದ್ಧಿಗೆ ಹೇಗೆ ಹಾನಿ ಮಾಡುತ್ತದೆ ಎಂಬ ವಿಚಾರವನ್ನು ಸಾಮಾನ್ಯ ಜನರಿಗೆ ತಿಳಿಸುವ ಮಹತ್ವದ ಕಾರ್ಯವನ್ನು ಮಾಡಲಾಗುತ್ತದೆ. ಹಾಗೆಯೇ ಈ ಹಿಂದೆ ಭಯೋತ್ಪಾದಕರು ಮಾಡಿದ ಹಿಂಸಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ.
ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ ಆಚರಣೆ ಪ್ರಾರಂಭ:
ಸುಮಾರು 32 ವರ್ಷಗಳ ಹಿಂದೆ ಇದೇ ದಿನ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ದಾಳಿ ಮಾಡಿ ಹತ್ಯೆ ಮಾಡಲಾಯಿತು. ಇದು ತಮಿಳು ಉಗ್ರರರು ನಡೆಸಿದ್ದ ಭಯೋತ್ಪಾದಕ ದಾಳಿಯಾಗಿತ್ತು.
21 ಮೇ 1991 ರಂದು, ರಾಜೀವ್ ಗಾಂಧಿಯವರು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಅಲ್ಲಿಯ ಭಯೋತ್ಪಾದಕ ಸಂಘಟನೆ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಆತ್ಮಹತ್ಯಾ ಬಾಂಬ್ ದಾಳಿಯ ಮೂಲಕ ಅವರನ್ನು ಹತ್ಯೆ ಮಾಡಿತ್ತು.
ರಾಜೀವ್ ಗಾಂಧಿಯವರ ಹತ್ಯೆಯ ಬಳಿಕ ವಿ.ಪಿ. ಸಿಂಗ್ ಅವರ ಸರ್ಕಾರವು ರಾಜೀವ್ ಗಾಂಧಿಯವರ ಸ್ಮರಣೆಗಾಗಿ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲು ನಿರ್ಧಾರಿಸಿತು.
ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ ಆಚರಣೆ ಹೇಗೆ:
ಈ ದಿನದಂದು, ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಗುತ್ತದೆ. ಅಲ್ಲದೆ, ಈ ದಿನದಂದು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಭಯೋತ್ಪಾದನಾ ವಿರೋಧಿ ಸಂದೇಶಗಳನ್ನು ಕಳುಹಿಸಲಾಗುತ್ತದೆ.
ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವು ಭಾರತದಲ್ಲಿ ಭಯೋತ್ಪಾದನೆಯ ಭೀಕರತೆಯನ್ನು ಜನರಿಗೆ ತಿಳಿಸುವಲ್ಲಿ ಮತ್ತು ಅದರ ಕುರಿತು ಜಾಗೃತಿಯನ್ನು ಮೂಡಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಭಯೋತ್ಪಾದನೆಯಲ್ಲಿ ಬಲಿಯಾದವರನ್ನು ಸ್ಮರಿಸಿಕೊಳ್ಳುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ.
ಭಾರತದ ಮೇಲಾಗಿರುವ ಭಯೋತ್ಪದನಾ ದಾಳಿಗಳು:
*1993 ರಲ್ಲಿ ಬಾಂಬೆ ಸ್ಫೋಟ
*2001ರಲ್ಲಿ ಸಂಸತ್ ದಾಳಿ
*2005 ರಲ್ಲಿ ದೆಹಲಿ ಬಾಂಬ್ ಸ್ಫೋಟ
*2006 ರಲ್ಲಿ ಮುಂಬೈ ರೈಲು ಬಾಂಬ್ ದಾಳಿ
*2008 ರಲ್ಲಿ ಜೈಪುರ ಸ್ಫೋಟ
*2008 ರಲ್ಲಿ ಮುಂಬೈ ದಾಳಿ
*2016ರಲ್ಲಿ ಉರಿ ದಾಳಿ
*2019 ರಲ್ಲಿ ಪುಲ್ವಾಮಾ ದಾಳಿ