ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿನಲ್ಲಿ ನಿರ್ಮಾಣವಾಗುತ್ತಿರುವ ಭೈರತಿ ರಣಗಲ್ ಸಿನಿಮಾವು ಶುಕ್ರವಾರ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಸೆಟ್ಟೆರಿದೆ. ಮಫ್ತಿ ಸಿನಿಮಾದ ಪ್ರಿಕ್ವೆಲ್ ಆಗಿರುವ ಭೈರತಿ ರಣಗಲ್ ಸಿನಿಮಾದಲ್ಲಿ ಶಿವಣ್ಣ ನಾಯಕ ನಟನಾಗಿ ಅಭಿನಯಿಸಲಿದ್ದಾರೆ.
ನಿರ್ದೇಶಕ ನರ್ತನ್, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮತ್ತು ಶ್ರೀಮುರಳಿ ಕಾಂಬಿನೇಷನ್ನಲ್ಲಿ ಮೂಡಿಬಂದ ‘ಮಫ್ತಿ’ ಸಿನಿಮಾ ಜನರ ಮೆಚ್ಚುಗೆ ಗಳಿಸಿತ್ತು. ಆ ಚಿತ್ರದಲ್ಲಿ ಶಿವಣ್ಣ ಮಾಡಿದ ಭೈರತಿ ರಣಗಲ್ ಎಂಬ ಪಾತ್ರ ಸಖತ್ ಹಿಟ್ ಆಗಿತ್ತು. ಮುಂದೊಂದು ದಿನ ಈ ಟೈಟಲ್ ಉಪಯೋಗಕ್ಕೆ ಬರುತ್ತದೆ ಎಂಬ ದೃಷ್ಟಿಯಿಂದಲೇ ಶಿವಣ್ಣ ಅಂದೇ ಆ ಟೈಟಲ್ ಅನ್ನು ರಿಜಿಸ್ಟರ್ ಮಾಡಿಸಿಟ್ಟಿದ್ದರು. ಈಗ ಅದೇ ಶೀರ್ಷಿಕೆಯಲ್ಲಿ ಹೊಸ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ.
ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ವೇದ ಸಿನಿಮಾದ ಮೂಲಕ ನಿರ್ಮಾಣಕ್ಕಿಳಿದಿರುವ ಶಿವರಾಜ್ಕುಮಾರ್ ಈಗ ತಮ್ಮದೇ ಬ್ಯಾನರ್ ಅಡಿಯಲ್ಲಿ “ಭೈರತಿ ರಣಗಲ್’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಭೈರತಿ ರಣಗಲ್ ಫ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲೂ ನಿರ್ಮಾಣವಾಗುತ್ತಿದೆ. ಇನ್ನು ಮಫ್ತಿ ಚಿತ್ರದ ನಿರ್ದೇಶಕ ನರ್ತನ್ ಭೈರತಿ ರಣಗಲ್ ಸಿನಿಮಾವನ್ನು ನಿದೇರ್ಶನ ಮಾಡಲಿದ್ದಾರೆ. ಹಾಗೆಯೇ ಭೈರತಿ ರಣಗಲ್ನಲ್ಲಿ ನವೀನ್ ಕುಮಾರ್ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ಇರಲಿದೆ.
ಜೂನ್-10 ರಿಂದಲೇ ಚಿತ್ರಿಕರಣ ಪ್ರಾರಂಭವಾಗಲಿದ್ದು, ಸಿನಿಮಾದ ನಾಯಕಿ ಯಾರು ಎಂದು ಸಿನಿಮಾ ತಂಡ ಇನ್ನೂ ಕೂಡಾ ರೀವಿಲ್ ಮಾಡಿಲ್ಲ.
ನಿರ್ದೇಶಕ ನರ್ತನ್, ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ನಿರ್ಮಾಪಕ ಶ್ರೀಕಾಂತ್ ಸೇರಿದಂತೆ ಹಲವರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.