ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು, ಸಾಮಾಜಿಕ ಜಾಲತಾಣಗಳಲ್ಲೂ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಕರಾವಳಿಯಲ್ಲಿ ಬಿಲ್ಲವ ಸಮುದಾಯ ದೊಡ್ಡ ಮಟ್ಟದಲ್ಲಿ ಇರುವುದಿಂದ ಈ ಭಾಗದವರಾಗಿರುವ ಬಿ.ಕೆ ಹರಿ ಪ್ರಸಾದ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರು. ಅದರಂತೆ ಮೊದಲ ಸಚಿವ ಸಂಪುಟ ರಚನೆಯಲ್ಲಿಯೇ ಸಿಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಮೊದಲ ಸಂಪು ರಚನೆಯಲ್ಲೂ ಸಚಿವ ಸ್ಥಾನ ಸಿಗಲಿಲ್ಲ, ಇನ್ನೂ ಇದೀಗ 24 ಜನ ಶಾಸಕರನ್ನು ಆಯ್ಕೆ ಮಾಡುವಾಗಲು ಅವರ ಹೆಸರನ್ನು ತೆಗೆದುಕೊಂಡಿಲ್ಲ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ರಾಯಚೂರು ಜಿಲ್ಲೆಯ ಮಾಜಿ ಶಾಸಕ ಎನ್. ಎಸ್. ಬೋಸರಾಜ್ ಅವರಿಗೆ ಅಚ್ಚರಿ ರೀತಿಯಲ್ಲಿ ಮಂತ್ರಿ ಸ್ಥಾನ ಒಲಿದುಬಂದಿದೆ.
ಮೂಲತಃ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲೂರು ಗ್ರಾಮದವರಾದ ಎನ್. ಎಸ್. ಬೋಸರಾಜ್, ಕೃಷಿಕ ಕುಟುಂಬದಲ್ಲಿ ಜನಿಸಿದರು. ಮದ್ರಾಸ್ನಲ್ಲಿ ಡಿಪ್ಲೊಮಾ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದು, ಓದುತ್ತಿರುವಾಗಲೇ ನಾಯಕತ್ವ ಗುಣ ಹೊಂದಿ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಆಸಕ್ತಿ ಹೊಂದಿದ್ದರು
ಸದಸ್ಯತ್ವ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನರ್ಹ ಆಗಿರುವ ಹಿನ್ನೆಲೆಯಲ್ಲಿ ಅವರು ವಿಶೇಷ ಸವಲತ್ತುಗಳನ್ನು ಕಳೆದುಕೊಂಡಿದ್ದರು. ಆದರೆ ಈಗ ರಾಹುಲ್ ಗಾಂಧಿಯವರು ಸಾಮಾನ್ಯ ಪಾಸ್ಪೋರ್ಟ್ನ ಅನ್ನು ಮೂರು ವರ್ಷಗಳ ಕಾಲ ಹೊಂದಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ)ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ.
ಸಂಸದ ಸ್ಥಾನದಿಂದ ಅನರ್ಹ ಆಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಅನ್ನು ವಾಪಸ್ ನೀಡಿದ್ದರು. ಬಳಿಕ ತಾವು ಪಾಸ್ ಪೋರ್ಟ್ ಹೊಂದಲು ನಿರಪೇಕ್ಷಣಾ ಪತ್ರ ಬಯಸಿ ನ್ಯಾಯಾಲಯದ ಮೊರೆ ಹೋಗಿದ್ದರು.
ಸಿದ್ದರಾಮಯ್ಯ ಸಚಿವ ಸಂಪುಟ ಇಂದು 24 ಸಚಿವರು ಪದಗ್ರಹಣದ ಮೂಲಕ ಪೂರ್ಣಗೊಂಡಿದ್ದು, ಸಚಿವ ಸಂಪುಟದ ಸಚಿವರಿಗೆ ಖಾತೆಯನ್ನು ಕೂಡಾ ಇಂದು ಹಂಚಿಕೆ ಮಾಡಲಾಗಿದೆ. ನೀರಿಕ್ಷೆಯಂತೆ ಸಿಎಂ ಸಿದ್ದರಾಮಯ್ಯ ಹಣಕಾಸು ಖಾತೆ ಜೊತೆಗೆ ಸಂಸದೀಯ ವ್ಯವಹಾರ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಮಾಹಿತಿ ಇಲಾಖೆ ಕೂಡ ಸಿಎಂ ಬಳಿಯೇ ಉಳಿದಿದೆ. ಡಿಸಿಎಂ ಡಿಕೆ ಶಿವಕುಮಾರ್ ಜಲಸಂಪನ್ಮೂಲ ಖಾತೆಯೊಂದಿಗೆ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಗಿಟ್ಟಿಸಿಕೊಂಡಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಯ ಅಂತಿಮ ಘಟ್ಟವನ್ನು ತಲುಪಿದ್ದು ನಾಳೆ ಐಪಿಎಲ್ ಕೊನೆಯ ಮ್ಯಾಚ್ನೊಂದಿಗೆ ಐಪಿಎಲ್ 2023 ಮುಕ್ತಾಯವಾಗಲಿದೆ. ಚೆನ್ನೈಸೂಪರ್ ಕಿಂಗ್ಸ್ ಹಾಗೂ ಗುಜರಾತ್ಟೈಟನ್ಸ್ ಫೈನಲ್ಸ್ ಪ್ರವೇಶಿಸಿದ್ದು, ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಮ್ಯಾಚ್ಗೆ ಅಹಮದಾಬಾದ್ನ ನರೇಂದ್ರಮೋದಿ ಸ್ಟೇಡಿಯಂ ಸಾಕ್ಷಿಯಾಗಲಿದೆ.
ಮಾಜಿ ಚಾಂಪಿಯನ್ಸ್ ಮತ್ತು ಹಾಲಿ ಚಾಂಪಿಯನ್ಸ್ ನಡುವೆ ಹಣಾಹಣಿ ನಡೆಯಲಿದ್ದು, ಐಪಿಎಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸೂಪರ್ ಸಂಡೇಯಾದ ನಾಳೆ ಸಂಜೆ 6 ಗಂಟೆಗೆ ಐಪಿಎಲ್ನ ಕೊನೆಯ ಪಂದ್ಯ ಪ್ರಾರಂಭವಾಗಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರು ಮೇ 31 ರಿಂದ ಜೂನ 3 ತನಕ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಠ್ಮಂಡುವಿನಲ್ಲಿ ವಿದೇಶಾಂಗ ಸಚಿವಾಲಯದ ಮೂಲಗಳು ಶುಕ್ರವಾರ ತಿಳಿಸಿವೆ.