ನಿನ್ನೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಫೈನಲ್ ಪಂದ್ಯ ನಡೆಯಬೇಕಿತ್ತು. ಐಪಿಎಲ್ನ ಫೈನಲ್ ಮ್ಯಾಚ್ನ್ನು ನೋಡಲು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳ ಆಸೆಗಳೆಲ್ಲ ಮಳೆಗೆ ಕೊಚ್ಚಿ ಹೋಗಿತ್ತು. ಸುರಿದ ಭೀಕರ ಮಳೆಯಿಂದಾಗಿ ಪಂದ್ಯ ನಡೆಸಲು ಸಾಧ್ಯವಾಗದೇ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ರೋಚಕ ಪಂದ್ಯವನ್ನು ಕಣ್ತುಂಬಿಕೊಳ್ಳಲು ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆಯಿಂದ ಮನೆಗೆ ಹಿಂತಿರುಗುವಂತಾಗಿತ್ತು.
ವಿಶೇಷವೆಂದರೆ ಐಪಿಎಲ್ ಟೂರ್ನಿಯ 16 ವರ್ಷಗಳ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಮೊದಲ ಬಾರಿಗೆ.
ನಿನ್ನೆ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಬೇಕಿತ್ತು ಆದರೆ ಪಂದ್ಯ ಟಾಸ್ ಹಾಕುವ ಮೊದಲೇ ಮಳೆ ಜೋರಾಗಿ ಬರಲು ಪ್ರಾರಂಭಿಸಿತು. ಮೈದಾನದ ಸಿಬ್ಬಂದಿ ಪಿಚ್ಗಳಿಗೆ, ವೇಗದ ಬೌಲರ್ಗಳ ರನ್ ಅಪ್ ಏರಿಯಾಗಳಿಗೆ ಟಾರ್ಪಾಲಿನ್ ಹೊದಿಸಿದರು. ಆದರೆ ಗುಡುಗು ಸಮೇತ ಮಳೆಯ ಅರ್ಭಟ ಹೆಚ್ಚಾಯಿತು.
ಸುಮಾರು 8.30ರ ಹೊತ್ತಿಗೆ ಮಳೆ ನಿಂತ ನಂತರ ಅಂಪೈರ್ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡಲು ಸಿದ್ದತೆ ನಡೆಸಿದರು. ಅದೇ ಸಂದರ್ಭದಲ್ಲಿ ಮಳೆ ಮತ್ತೆ ಸುರಿಯಲಾರಂಭಿಸಿತು. ಮಳೆ ಮುಂದುವರೆದುದರಿಂದ ಅಂಪೈರ್ಗಳು ಸಮಾಲೋಚನೆ ನಡೆಸಿ ಪಂದ್ಯವನ್ನು ಇಂದಿಗೆ ಮುಂದೂಡಲಾಯಿತು.
ಒಂದು ವೇಳೆ ಮೀಸಲು ದಿನವಾದ ಇಂದುಕೂಡ ಮಳೆಯಾದರೆ 5 ಓವರ್ಗಳ ಪಂದ್ಯ ಅಥವಾ ಸೂಪರ್ ಓವರ್ನ ಪಂದ್ಯ ಕೂಡ ನಡೆಸಲು ಸಾಧ್ಯವಾಗಲಿಲ್ಲ ಎಂದಾದರೆ ಲೀಗ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ವಿಜಯಶಾಲಿಯಾಗಲಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ಗೆ ಲಾಭವಾಗಲಿದೆ.