ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕುತ್ತಾರ್ ಕೊರಗಜ್ಜನ ದೇವಾಲಯಕ್ಕೆ ಭೇಟಿ ನೀಡಿದ್ದರು. ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಮಂಗಳೂರು ಕುತ್ತಾರ್ ಕೊರಗಜ್ಜ ಕ್ಷೇತ್ರಕ್ಕೆ ಬಂದು ಆಶೀರ್ವಾದ ಪಡೆದುಕೊಂಡಿದ್ದಾರೆ.
ರಚಿತಾ ರಾಮ್ ಮಂಗಳೂರು ಹೊರವಲಯದ ಕುತ್ತಾರಿನಲ್ಲಿರುವ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದು ಮುಂಬರುವ ಚಿತ್ರಗಳ ಯಶಸ್ಸಿಗಾಗಿ ಪ್ರಾರ್ಥನೆ ಮಾಡಲು ಬಂದಿರುವುದಾಗಿ ನಟಿ ತಿಳಿಸಿದ್ದಾರೆ. ಇದು ನನ್ನ ಮೊದಲ ಭೇಟಿ, ಬಂದಿದಕ್ಕೆ ಖುಷಿಯಾಗುತ್ತಿದೆ ಎಂದಿದ್ದಾರೆ. ಇಲ್ಲಿ ಬಂದರೆ ತುಂಬಾ ನೆಮ್ಮದಿ ಅನಿಸುತ್ತದೆ ಎಂದು ಫ್ರೆಂಡ್ಸ್ ಹೇಳಿದ್ದರು. ಅವರಿಗೆ ಥ್ಯಾಂಕ್ಸ್, ಅವರಿಂದಲೇ ನಾನು ಇಲ್ಲಿವೆ ಬರುವ ಹಾಗಾಯಿತು ಎಂದು ಸಂತಸ ಹೊರಹಾಕಿದರು.
ಮುಂಬರುವ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿನ ಬಗ್ಗೆ ಪ್ರಾರ್ಥನೆ ಮಾಡಿದ್ದಾಗಿ ನಟಿ ಹೇಳಿಕೊಂಡಿದ್ದಾರೆ. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ದರು. ಹಾಗಾಗಿ ನನಗೂ ಕೊರಗಜ್ಜ ದೈವದಲ್ಲಿ ಭಕ್ತಿಯಿಂದ ಪ್ರಾರ್ಥಿಸಬೇಕು ಅನ್ನಿಸಿತು ಅದಕ್ಕೆ ಒಮ್ಮೆ ಬಂದಿರುವೆ ಎಂದರು. ಈ ಕ್ಷೇತ್ರ ಪ್ರಾಕೃತಿಕ ಸೌಂದರ್ಯವನ್ನು ಒಳಗೊಂಡು ತುಂಬಾ ಚೆನ್ನಾಗಿದೆ. ಇಲ್ಲಿ ತುಂಬಾ ಪಾಸಿಟಿವ್ ವೈಬ್ಸ್ ಅನುಭವವಾಗುತ್ತದೆ. ನನ್ನ ಮುಂಬರುವ ಚಿತ್ರಗಳ ಬಗ್ಗೆ ಪ್ರಾರ್ಥಿಸಿದ್ದೇನೆ ಎಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ನಟಿ ರಚಿತಾ ರಾಮ್ ಮಾಧ್ಯಮದೊಂದಿಗೆ ಮಾತನಾಡಿದರು.
ರಚಿತಾ ರಾಮ್ ಅವರು ಸ್ಯಾಂಡಲ್ವುಡ್ನಲ್ಲಿ ಹಲವು ಸಿನಿಮಾಗಳನ್ನು ಮಾಡುತ್ತಾ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದು, ತಮ್ಮ ಸಿನಿಮಾಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಸಿನಿಮಾ ಬಿಡುಗಡೆಗೆ ಮುನ್ನವೇ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪ್ರಾರ್ಥಿಸಿದ್ದು ಸಿನಿಮಾ ಸಕ್ಸಸ್ಗಾಗಿ ಬೇಡಿಕೊಳ್ಳಲು ಬಂದದ್ದು ಸಂತಸ ತಂದಿದೆ.