ವಿಶ್ವಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಅಜಯ್ ಬಂಗಾ ಅವರು ನೇಮಕಗೊಂಡಿದ್ದಾರೆ.
ಮುಂದಿನ 5 ವರ್ಷಗಳ ಕಾಲ ವಿಶ್ವಬ್ಯಾಂಕ್ ನ ಮುಖ್ಯಸ್ಥರಾಗಿ ಅಜಯ್ ಬಂಗಾ ಕಾರ್ಯನಿರ್ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್ ಹಾಗೂ ವಿಶ್ವ ಬ್ಯಾಂಕ್ ಎರಡಕ್ಕೂ ಅಧ್ಯಕ್ಷರಾಗಿ ನೇಮಕವಾದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಬಗ್ಗೆ ವಿಶ್ವ ಬ್ಯಾಂಕ್ ಟ್ವೀಟ್ ಮಾಡಿದ್ದು, ನಾವು ವಿಶ್ವವನ್ನು ಬಡತನ ಮುಕ್ತಗೊಳಿಸಲು ಮತ್ತು ವಾಸಿಸಲು ಯೋಗ್ಯ ಸ್ಥಳವಾಗಿಸಲು ಪಣತೊಟ್ಟಿದ್ದೇವೆ. ನೂತನ ಅಧಕ್ಷರಾದ ಅಜಯ್ ಬಂಗಾ ಅವರಿಗೆ ಸ್ವಾಗತ ಕೋರುತ್ತೇವೆ ಎಂದಿದೆ.
63 ವರ್ಷದ ಅಜಯ್ ಬಂಗಾ ಅವರು ಪುಣೆಯಲ್ಲಿ ಜನಿಸಿದ್ದು, ಅಹಮದಾಬಾದ್ ದ ಐಐಎಂ ನಲ್ಲಿ ಎಂಬಿಎ ಮಾಡಿದ್ದರು.
–
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ನಿವೃತ್ತಿ ದಿನಾಂಕ ಘೋಷಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ನಾನು ಬಹುಷಃ ನನಗೆ ಮತ್ತು ನನ್ನ ಕುಟುಂಬಕ್ಕೆ ಋಣಿಯಾಗಿರುತ್ತೇನೆ. ಇಲ್ಲಿ ನಾನು ರನ್ ಗಳಿಸಿದ್ದೇ ಆದಲ್ಲಿ ನಾನು ಆಸ್ಟ್ರೇಲಿಯಾದಲ್ಲಿ ಆಡುವುದನ್ನು ಮುಂದುವರಿಸುತ್ತೇನೆ. ಆದರೆ ನಾನು ವೆಸ್ಟ್ ಇಂಡೀಸ್ ಸರಣಿಯನ್ನು ಆಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ ಎಂದರು.
ಮುಂದಿನ ವರ್ಷ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳುತ್ತೇನೆ. ಪಾಕಿಸ್ತಾನ ವಿರುದ್ಧ ಸಿಡ್ನಿ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಪಂದ್ಯವಾಗಲಿದೆ. ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಹಾಗೂ ಏಷ್ಯನ್ ಟೆಸ್ಟ್ ಸರಣಿಯಲ್ಲಿ ಮುಂದುವರಿಯುತ್ತೇನೆ. ನಂತರ ಪಾಕಿಸ್ತಾನ ವಿರುದ್ಧದ ತವರು ಟೆಸ್ಟ್ ಸರಣಿಯಲ್ಲಿ ನನ್ನ ವೃತ್ತಿ ಜೀವನವನ್ನು ಮುಗಿಸುತ್ತೇನೆ ಎಂದಿದ್ದಾರೆ.
–
ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಪಡೆಯಲಿವೆ ಎಂದು ಭಾರತದ ಜಿ20 ರಾಯಭಾರಿ ಮತ್ತು ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.
ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳು ಪ್ರಮುಖ ಪಾತ್ರ ವಹಿಸಲಿವೆ. ನಂತರ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಮಹತ್ವಾಕಾಂಕ್ಷೆಯಲ್ಲಿ ಹೆಚ್ಚಿನ ಕೊಡುಗೆಯನ್ನು ದಕ್ಷಿಣ ರಾಜ್ಯಗಳು ನೀಡುವ ನಿರೀಕ್ಷೆ ಇದೆ ಎಂದರು.
ಈಗಾಗಲೇ ಭಾರತದ ಜಿಡಿಪಿಗೆ ಶೇ.30ರಷ್ಟು ಕೊಡುಗೆಯನ್ನು ದಕ್ಷಿಣ ಭಾರತದ ರಾಜ್ಯಗಳು ನೀಡುತ್ತಿವೆ. ಈ ರಾಜ್ಯಗಳು ಅತ್ಯುತ್ತಮ ಉದ್ಯೋಗ, ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಪ್ರದರ್ಶಿಸಿವೆ. ಆದ್ದರಿಂದ ಜೀವನದ ಗುಣಮಟ್ಟ ಮತ್ತು ಆರೋಗ್ಯ, ಶಿಕ್ಷಣ ಮತ್ತು ಪೋಷಣೆಯಲ್ಲಿನ ಸಾಮಾಜಿಕ ಸೂಚಕಗಳಲ್ಲಿ ಭಾರತದ ಉಳಿದ ಭಾಗಗಳಿಗೆ ಹೋಲಿಸಿದರೆ ಈ ರಾಜ್ಯಗಳು ಮುಂಚೂಣಿಯಲ್ಲಿವೆ ಎಂದು ಹೇಳಿದ್ದಾರೆ.
–
ಶುಕ್ರವಾರ ರಾತ್ರಿ ಒಡಿಶಾದಲ್ಲಿ ನಡೆದ ತ್ರಿವಳಿ ರೈಲುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಈ ಹಿನ್ನೆಲೆ ಈ ಮಾರ್ಗದ ರೈಲು ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿದೆ.
ಸದ್ಯ ಅಪಘಾತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಈ ಕಾರಣದಿಂದ ಇಂದು ಒಟ್ಟು 49 ರೈಲುಗಳ ಸಂಚಾರ ರದ್ದಾಗಿದ್ದು, 38 ರೈಲುಗಳ ಮಾರ್ಗ ಬದಲಾಯಿಸಲಾಗಿದೆ ಎಂದು ನೈಋತ್ವ ರೈಲ್ವೆ ತನ್ನ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.
ಇನ್ನು ನಾಳೆ ಕೂಡ 8ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಾಯಿಸಿದ್ದು, ಎರಡು ರೈಲುಗಳ ಸಂಚಾರ ರದ್ದು ಮಾಡಲಾಗಿದೆ.
https://twitter.com/SWRRLY/status/1665003814536253442?s=20
–
ಒಡಿಶಾದಲ್ಲಿ ನಡೆದ ರೈಲು ಅವಘಡದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ., ತೀವ್ರ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ, ನೆರವು ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪ್ರತ್ಯೇಕವಾಗಿ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಗಾಯಗೊಂಡವರಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ.
ಇನ್ನು ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳದ ಪ್ರಯಾಣಿಕರಿಗೆ ಮಮತಾ ಬ್ಯಾನರ್ಜಿ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ.
–