ಬೇಸಿಗೆ ಮುಗಿದು ಇನ್ನೇನು ಮಾನ್ಸೂನ್ ಆಗಮನವಾಗಿದೆ. ಆದರೂ ಶಾಖದ ಅಲೆಯ ಬೇಸಿಗೆ ಅನುಭವ ಇನ್ನೂ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಇನ್ನು ಪ್ರವಾಸ ಮಾಡಲು ಉತ್ಸುಕವಾಗಿರುವ ಜನರಿಗೆ ಕೆಲವು ಅತ್ಯುತ್ತಮ ಪ್ರವಾಸ ಅನುಭವದೊಂದಿಗೆ ಧಾರ್ಮಿಕ ಸ್ಥಳ ಭೇಟಿ ಮಾಡುವ ಸ್ಥಳವೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳ ನಡುವೆ ನೆಲೆಸಿರುವ ಕೇದಾರನಾಥ ಅನೇಕರ ಕನಸಿನ ತಾಣವಾಗಿದೆ.
ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು 8 ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದಾಗಿದೆ. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ಕೇದಾರನಾಥ ಯಾತ್ರೆಯು ‘ಭಾರತ-ಚೀನಾ’ ಗಡಿಗೆ ಅಂಟಿಕೊಂಡಂತಿರುವ ‘ಗೌರಿಕುಂಡ’ವೆಂಬ ಪ್ರದೇಶದಿಂದ ಪ್ರಾರಂಭವಾಗುತ್ತದೆ. ಸಮತಟ್ಟಾದ ಪ್ರದೇಶವಾದ ಇಲ್ಲಿಂದ ಸುಮಾರು 14 ಕಿ.ಮೀ. ಕಾಲ್ನಡಿಗೆ, ಕುದುರೆಸವಾರಿ ಅಥವಾ ಡೋಲಿಯಲ್ಲಿ ಪಯಣಿಸಬಹುದು. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಈ ದೇವಸ್ಥಾನದ ಹಿಂದೆಯೇ ಶಂಕರರ ಸಮಾಧಿ ಮಂದಿರವಿದೆ. ಗೌರಿಕುಂಡವು ಸಮುದ್ರಮಟ್ಟದಿಂದ 65೦೦ ಅಡಿ ಎತ್ತರದಲ್ಲಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳಲ್ಲೊಂದಾದ ಏಕೋರಾಮಾರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು, ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ.
ಕೇದಾರನಾಥದ ಹವಾಮಾನವು ಆಹ್ಲಾದಕರವಾಗಿರುತ್ತದೆ. ಇದು ಸುಡುವ ಶಾಖದ ಅಲೆಗಳಿಂದ ಬೇರೆಯದೇ ಲೋಕಕ್ಕೆ ಕರೆದೊಯ್ಯುತ್ತದೆ. ಹೆಚ್ಚುತ್ತಿರುವ ತಾಪಮಾನದಿಂದಾಗಿ ಹೆಚ್ಚಿನವರು ಎದುರಿಸುತ್ತಿರುವ ಅಸ್ವಸ್ಥತೆಯ ನಡುವೆ ಕೇದಾರನಾಥವು ತನ್ನದೇ ಆದ ಮೋಡಿಮಾಡುವ ಪ್ರವಾಸ ಅನಭವವನ್ನು ನೀಡುವುದರಲ್ಲಿ ಅನುಮಾನ ಇಲ್ಲ. ಕೇದಾರನಾಥ ದರ್ಶನವು ಆಧ್ಯಾತ್ಮಿಕ ಅನುಭವದ ಜೊತೆಗೆ ನೀವು ಅಹ್ಲಾದಕರ ಹವಾಮಾನವನ್ನು ಅನುಭವಿಸಬಹುದು.
ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೋಲಿ (ಉತ್ತರಕಾಶಿ) ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೇಲಿರುವ ಶಿವನ ದೇವಾಲಯ. ತುಂಬಾ ಎತ್ತರದಲ್ಲಿರುವ ಈ ಸ್ಥಳವು ವಿಪರೀತ ಚಳಿಯ ವಾತಾವರಣದಿಂದಾಗಿ ದೇವಾಲಯವು ಕೇವಲ ಏಪ್ರಿಲ್ ಕೊನೆಯ ಭಾಗದಿಂದ ನವೆಂಬರ್ ಮೊದಲ ವಾರದವರೆಗೆ ಮಾತ್ರ ಭಕ್ತಾದಿಗಳ ದರ್ಶನಕ್ಕೆ ಮುಕ್ತವಾಗಿರುತ್ತದೆ. ಒಮ್ಮೆಯಾದರೂ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಳ್ಳಿ.