ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮರುನಾಮರಕಣ: ಕಾಂಗ್ರೆಸ್ ಟೀಕೆ
ದೆಹಲಿಯ ತೀನ್ ಮೂರ್ತಿ ಭವನದಲ್ಲಿರುವ ನೆಹರೂ ಮೆಮೋರಿಯಲ್ ಮ್ಯೂಸಿಯಂ ಆಂಡ್ ಲೈಬ್ರೆರಿಯನ್ನು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ.
ಈ ಲೈಬ್ರೆರಿಯನ್ನು ಪ್ರಧಾನಮಂತ್ರಿ ಮೆಮೋರಿಯಲ್ ಮ್ಯೂಸಿಯಂ ಆಂಡ್ ಲೈಬ್ರೆರಿ ಸೊಸೈಟಿ ಎಂದು ಹೆಸರಿಸಲು ನಿರ್ಧರಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಕೇಂದ್ರದ ವಿರುದ್ದ ಕಿಡಿಕಾರಿದ್ದಾರೆ. ಇದು ಕೇಂದ್ರ ಸರ್ಕಾರದ ಸಣ್ಣತನ ಕಾಣುತ್ತಿದೆ ಎಂದಿದೆ.
ಜವಹರಲಾಲ್ ನೆಹರು ಅವರ ಅಧಿಕೃತ ನಿವಾಸದಲ್ಲಿದ್ದ ತೀನ್ ಮೂರ್ತಿ ಭವನದ ಆವರಣದಲ್ಲಿ ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಉದ್ಘಾಟಿಸಿ ಈಗಾಗಲೇ ಒಂದು ವರ್ಷ ಕಳೆದಿದೆ. ಈ ವೇಳೆ ಸೊಸೈಟಿಯನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಸಭೆಯ ಬಳಿಕ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತಮಾಡಿ, ಹೆಸರಿನ ಬದಲಾವಣೆಯನ್ನು ಎಲ್ಲರೂ ಸ್ವೀಕರಿಸಿದ್ದು, ಈ ಸಂಸ್ಥೆ ಜವಹರಲಾಲ್ ನೆಹರು ಅವರಿಂದ ಪ್ರಧಾನಿ ಮೋದಿಯವರೆಗಿನ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಗಳನ್ನು ಮತ್ತು ಅವರು ಎದುರಿಸುತ್ತಿರುವ ಸವಾಲುಗಳಿಗೆ ಅವರು ನೀಡಿದ ಪ್ರತಿಕ್ರಿಯೆಯನ್ನು ಪ್ರದರ್ಶಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೊನೆಗೂ ಬಿಡುಗಡೆಯಾಯ್ತು ಏಷ್ಯಾಕಪ್ 2023 ಟೂರ್ನಿಯ ವೇಳಾಪಟ್ಟಿ
ಈ ಬಾರಿಯ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ವೇಳಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಹೈಬ್ರಿಡ್ ಮಾದರಿ ವೇಳಾಪಟ್ಟಿ ಪ್ರಕಟಗೊಳಿಸಿದೆ.
ಟೂರ್ನಿಯ ಒಟ್ಟು 13 ಪಂದ್ಯಗಳ ಪೈಕಿ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಉಳಿದ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.
ಈ ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಎದುರಾಗಲಿವೆ.
ಟೂರ್ನಿಯಲ್ಲಿ ಒಟ್ಟು 2 ಗುಂಪುಗಳಲ್ಲಿ ಟೂರ್ನಿ ಆಯೋಜನೆ ಮಾಡಲಾಗಿದ್ದು, ಈ ಗುಂಪುಗಳಲ್ಲಿ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆಯಲಿವೆ.
ಸೂಪರ್ ಫೋರ್ ಹಂತದಲ್ಲಿ ಗೆದ್ದ ಎರಡು ತಂಡಗಳು ಫೈನಲ್ ಗೆ ಪ್ರವೇಶಿಸಲಿದೆ. ಏಷ್ಯಾ ಕಪ್ 2023 ರ ಸೆಪ್ಟೆಂಬರ್ 31 ರಿಂದ ಅಕ್ಟೋಬರ್ 17 ರವರೆಗೆ ನಡೆಯಲಿದೆ ಎಂದು ಘೋಷಿಸಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಯೋಗ ಅಧಿವೇಶನ
ಪ್ರತಿ ವರ್ಷ ಜೂನ್ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ವಿಶ್ವ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಯೋಗ ಅಧಿವೇಶನದ ನೇತೃತ್ವ ವಹಿಸಲಿದ್ದಾರೆ.
ಇದೇ 21ರಂದು ನಡೆಯಲಿರುವ 9ನೇ ಅಂತಾರಾಷ್ಟ್ರೀಯ ಯೋಗ ದಿನದ ವಿಶ್ವಸಂಸ್ಥೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಉನ್ನತ ಅಧಿಕಾರಿಗಳು, ರಾಯಭಾರಿಗಳು, ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್: ಸಾವಿನ ಸಂಖ್ಯೆ ಆರಕ್ಕೆ ಏರಿಕೆ
ಗುಜರಾತ್ ನಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರಕ್ಕೆ ಗುರುವಾರ ಸಂಜೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಎನ್ ಡಿಆರ್ ಎಫ್ ಅಧಿಕೃತ ಮಾಹಿತಿ ನೀಡಿದ್ದು, ಈ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ರಾಮ್ ಪರ್ಮಾರ್ (55) ಹಾಗೂ ರಾಜೇಶ್ (22) ಸೋದ್ವಾದರ್ ಗ್ರಾಮದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಕುರಿಗಳ ಹಿಂಡನ್ನು ರಕ್ಷಿಸುತ್ತಿದ್ದ ಸಂದರ್ಭದಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಚಂಡಮಾರುತದ ಪ್ರಭಾವದಿಂದಾಗಿ ಈವರೆಗೆ 22 ಮಂದಿ ಗಾಯಗೊಂಡಿದ್ದಾರೆ.
ಗುರುವಾರ ಸಂಜೆ 6:30ರ ಸುಮಾರಿಗೆ ಜಖೌ ಬಂದರಿನ ಬಳಿ ಚಂಡಮಾರುತವು ಭಾರತದ ಭೂ ಪ್ರದೇಶವನ್ನು ಪ್ರವೇಶಿಸಿದೆ.ಗುರುವಾರ ಸಂಜೆ ಪಶ್ಚಿಮ ಕರಾವಳಿಯಾದ್ಯಂತ ವ್ಯಾಪಕ ಮಳೆ, ಬಿರುಗಾಳಿ ಸಂಭವಿಸಿದೆ.
ಡಿಕೆಶಿಗೆ ಬಿಗ್ ರಿಲೀಫ್: ಐದು ಪ್ರಕರಣ ರದ್ದು
ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.