ಪ್ರಯಾಣಿಕರ ಬೇಡಿಕೆ ಹಿನ್ನೆಲೆ ಆರಂಭಿಸಲಾಗಿದ್ದ ವಿಶೇಷ ರೈಲುಗಳ ಸೇವೆಯನ್ನು ಮುಂದಿನ ಎರಡೂ ತಿಂಗಳ ಮಟ್ಟಿಗೆ ವಿಸ್ತರಣೆ ಮಾಡಿ ನೈರುತ್ಯ ರೈಲ್ವೆ ಆದೇಶ ಹೊರಡಿಸಿದೆ.
ಮಂಗಳೂರು – ವಿಜಯಪುರ ನಡುವೆ ಸಂಚಾರ ಮಾಡುವ ವಿಶೇಷ ರೈಲುಗಳು ಹಾಗೂ ಹುಬ್ಬಳ್ಳಿಯಿಂದ ತಮಿಳುನಾಡಿನ ರಾಮೇಶ್ವರ ನಡುವೆ ಸಂಚಾರ ಮಾಡುವ ವಿಶೇಷ ರೈಲುಗಳನ್ನು ವಿಸ್ತರಣೆ ಮಾಡಲಾಗಿದೆ. ಈ ರೈಲುಗಳ ಅಂತಿಮ ಓಡಾಟ ಜೂನ್ 30ಕ್ಕೆ ನಿಗದಿಯಾಗಿತ್ತು. ಆದರೆ ಪ್ರಯಾಣಿಕರಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆ ವಿಸ್ತರಣೆ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅವಧಿ ವಿಸ್ತರಣೆಯಾಗಿರುವ ವಿಶೇಷ ರೈಲುಗಳು:
* ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಪ್ರತಿ ಶನಿವಾರ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ( ರೈಲು ಸಂಖ್ಯೆ 07355) ಸೇವೆಯನ್ನು ಜುಲೈ 1 ರಿಂದ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 24 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು.
*ರಾಮೇಶ್ವರಂ ಮತ್ತು ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಭಾನುವಾರ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು (ರೈಲು ಸಂಖ್ಯೆ 07356) ಸೇವೆಯನ್ನು ಜುಲೈ 2 ರಿಂದ ಅಕ್ಟೋಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 25 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು.
* ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಪ್ರತಿ ದಿನ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು ( ರೈಲು ಸಂಖ್ಯೆ 07377) ಸೇವೆಯನ್ನು ಜುಲೈ 1 ರಿಂದ ಅಗಸ್ಟ್ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 30 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು.
*ಮಂಗಳೂರು ಜಂಕ್ಷನ್ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಪ್ರತಿ ದಿನ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲು (ರೈಲು ಸಂಖ್ಯೆ 07378 ) ಸೇವೆಯನ್ನು ಜುಲೈ 2 ರಿಂದ ಸೆಪ್ಟೆಂಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 1 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು.
ನಾಯಂಡಹಳ್ಳಿಯಲ್ಲಿ ಸ್ಟಾಪ್ ಕೊಡಲಿರುವ ಎಕ್ಸ್ಪ್ರೆಸ್ ರೈಲುಗಳು:
ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಒಂದಾದ ನಾಯಂಡಹಳ್ಳಿಯಲ್ಲಿ ಬೆಂಗಳೂರು ಮೈಸೂರು ಮಾರ್ಗದಲ್ಲಿ ಸಂಚಾರ ನಡೆಸುವ ನಾಲ್ಕು ಪ್ರಮುಖ ರೈಲುಗಳ ನಿಲುಗಡೆ ಮಾಡಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಯಾವೆಲ್ಲಾ ರೈಲುಗಳು ನಿಲುಗಡೆಯಾಗಲಿವೆ:
* ಮೈಸೂರು-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಅನ್ ರಿಸರ್ವ್ಡ್ ಎಕ್ಸ್ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 06269) ಮಧ್ಯರಾತ್ರಿ 12.17ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 12.18ಕ್ಕೆ ಹೊರಡಲಿದೆ.
* ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮೈಸೂರು ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 06270) ಮಧ್ಯರಾತ್ರಿ 12.27 ಗಂಟೆಗೆ ನಾಯಂಡ ಹಳ್ಳಿಗೆ ಆಗಮಿಸಿ 12.28ಕ್ಕೆ ಹೊರಡಲಿದೆ.
* ಮೈಸೂರು-ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ. 06526) ರಾತ್ರಿ 10.27ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 10.28ಕ್ಕೆ ಹೊರಡಲಿದೆ.
*ಕೆಎಸ್ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ. 06525) ಸಂಜೆ 5.04 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 5.05 ಕ್ಕೆ ಹೊರಡಲಿದೆ.