‘ಆದಿಪುರುಷ್’ ಚಿತ್ರವನ್ನು ಟೀಕಿಸಲು ಅನೇಕ ವಿಚಾರಗಳು ಸಿಗುತ್ತಿವೆ. ಸೈಫ್ ಅಲಿ ಖಾನ್ ಮಾಡಿರುವ ರಾವಣನ ಪಾತ್ರದಿಂದ ಹಿಡಿದು, ಚಿತ್ರದ ಸಂಭಾಷಣೆವರೆಗೆ ಅನೇಕ ರೀತಿಯ ಟೀಕೆಗಳು ವ್ಯಕ್ತವಾಗಿದೆ. ಮೊದಮೊದಲು ಈ ಸಿನಿಮಾದ ಬಗ್ಗೆ ಹೊಗಳಿಕೆಗಳು ಜಾಸ್ತಿಯಾಗಿ ಈಗ ನೋಡಿದರೆ ಸಿನಿಮಾ ನೋಡಲು ಜನವೇ ಬರದಿರುವ ಹಾಗೆ ಆಗಿದೆ.
ಆದಿಪುರುಷ್ ಸಿನಿಮಾದ ಕಲೆಕ್ಷನ್ ದಿನೇ ದಿನೇ ತಗ್ಗುತ್ತಿದೆ. ಸಿನಿಮಾ ಕ್ಷೇತ್ರದವರಿಗೆ ಶುಕ್ರವಾರ ವಿಶೇಷ ದಿನವಾಗಿದ್ದರು, ಆ ದಿನವೂ ‘ಆದಿಪುರುಷ್’ ಸಿನಿಮಾ ಗಳಿಕೆ ಮಾಡಿದ್ದು ಕೇವಲ 3 ಕೋಟಿ ರೂಪಾಯಿ. 150 ರೂಪಾಯಿ ಟಿಕೆಟ್ ಆಫರ್ ಕೂಡ ಕೆಲಸ ಮಾಡುತ್ತಿಲ್ಲ ಎನ್ನಲಾಗುತ್ತಿದೆ.
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರ ಸಿನಿಮಾ ಟಿಕೆಟ್ ಬೆಲೆ ಇಳಿಕೆ ಮಾಡಿದ್ರು, ಜನ ಸಿನಿಮಾ ನೋಡಲು ಬರುತ್ತಿಲ್ಲ. ಆದಿಪುರುಷ್ ಸಿನಿಮಾದ ಟಿಕೆಟ್ನನ್ನು 150 ರೂಪಾಯಿಗೆ ಕೊಡುತ್ತೇವೆ. ಬಂದು ಸಿನಿಮಾವನ್ನು ನೋಡಿಕೊಂಡು ಹೋಗಿ ಎಂದು ಆಫರ್ ಕೊಟ್ಟರೂ, ಯಾರೂ ಚಿತ್ರ ನೋಡಲು ಮುಂದಾಗುತ್ತಿಲ್ಲ. ಗುರುವಾರ ಮಲ್ಟಿಪ್ಲೆಕ್ಸ್ಗಳಲ್ಲಿ 150 ರೂಪಾಯಿಗೆ ಟಿಕೆಟ್ ಬೆಲೆ ಇಳಿಸಲಾಗಿತ್ತು. ಐನಾಕ್ಸ್, ಪಿವಿಆರ್ ಮೊದಲಾದ ಕಡೆಗಳಲ್ಲಿ ಈ ಆಫರ್ ಇದ್ದರೂ, ಜನ ಸಿನಿಮಾಮಂದಿರ ಕಡೆ ತಲೆಕೂಡ ಹಾಕಿಲ್ಲ ಅನ್ನುವುದೆ ವಿಷಾದಕರ ಸಂಗತಿ.
ಇನ್ನೂಂದು ಕಡೆ ಚಿತ್ರಮಂದಿರದಿಂದ ‘ಆದಿಪುರುಷ್’ ಶೋ ನ ಕಡಿತ ಮಾಡುವ ಕೆಲಸ ನಡೆಯುತ್ತಿದೆ. ಅನೇಕ ಕಡೆಗಳಲ್ಲಿ ಶೋನ ಕಿತ್ತೆಸೆಯಲಾಗಿದೆ. ಹೀಗಾಗಿ, ವೀಕೆಂಡ್ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದ ಚಿತ್ರತಂಡಕ್ಕೆ ಸಾಕಷ್ಟು ಹಿನ್ನಡೆ ಉಂಟಾಗುತ್ತಿದೆ.
ಆದಿಪುರುಷ್ ಸಿನಿಮಾದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದ್ದಾರೆ. ಕೃತಿ ಸನೋನ್ ಸೀತೆಯಾಗಿ ಕಾಣಿಸಿಕೊಂಡಿದ್ದು, ಓಂ ರಾವತ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಗೆಲ್ಲುವ ನಿರೀಕ್ಷೆಯಲ್ಲಿ ಇವರಿದ್ದರು. ಆದರೆ, ರಾಮಾಯಣವನ್ನು ಅಣಕಿಸಿದ ರೀತಿಯಲ್ಲಿ ‘ಆದಿಪುರುಷ್’ ಚಿತ್ರ ಇದೆ ಎಂದು ಅನೇಕರು ಆರೋಪಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾಗೆ ಹಿನ್ನಡೆ ಆಗುತ್ತಿರಬಹುದು ಎನ್ನಲಾಗಿದೆ.
ರಾಮನ ಪಾತ್ರಕ್ಕೆ ಪ್ರಭಾಸ್ ಹೊಂದುತ್ತಿಲ್ಲ ಎಂಬುದು ಕೆಲವರ ಅಭಿಪ್ರಾಯ. ಸಿನಿಮಾ ರಿಲೀಸ್ಗೂ ಮೊದಲು ಇದು ಸಂಪೂರ್ಣವಾಗಿ ರಾಮಾಯಣ ಆಧರಿತ ಚಿತ್ರ ಎನ್ನುತ್ತಿದ್ದ ಸಿನಿಮಾ ತಂಡದವರು, ಸಿನಿಮಾ ರಿಲೀಸ್ ಆದ ಬಳಿಕ ‘ನಾವು ರಾಮಾಯಣವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ ಅಷ್ಟೇ’ ಎಂದು ಹೇಳಿಕೆ ನೀಡಿದ್ದು, ಇದು ಕೂಡ ಚಿತ್ರತಂಡಕ್ಕೆ ಕಷ್ಟವಾಯಿತು ಎನ್ನಬಹುದು.