ನಟ, ನಿರ್ಮಾಪಕ, ನಿರ್ದೇಶಕ ಮಾಸ್ಟರ್ ಮಾಸ್ಟರ್ ಆನಂದ್ಗೆ ವಂಚನೆಯಾಗಿದ್ದು, ನಟ ಆನಂದ್ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ನಿವೇಶನ ನೀಡುವುದಾಗಿ ಮಲ್ಟಿ ಲೀಪ್ ವೆಂಚರ್ಸ್ ಹೆಸರಿನ ಕಂಪನಿಯು ಆನಂದ್ ಅವರಿಗೆ 18.50 ಲಕ್ಷ ರೂಪಾಯಿ ವಂಚನೆ ಮಾಡಿದೆ ಎಂದು ಕಂಪನಿ ವಿರುದ್ದ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.
ಪ್ರಕರಣ ಏನು?
ಆನಂದ್ ಅವರು ಜುಲೈ 2020 ರಲ್ಲಿ ಚಲನಚಿತ್ರ ಚಿತ್ರೀಕರಣಕ್ಕಾಗಿ ಕೊಮ್ಮಘಟ್ಟದ ರಾಮಸಂದ್ರಕ್ಕೆ ಭೇಟಿ ನೀಡಿದಾಗ ‘ಮಾರಾಟಕ್ಕಿವೆ’ ಎಂಬ ಫಲಕಗಳೊಂದಿಗೆ ಖಾಲಿ ನಿವೇಶನಗಳನ್ನು ನೋಡಿದ್ದಾರೆ.
ಈ ವೇಳೆ ಅವರ ವಿಚಾರಣೆ ಮಾಡಿದಾಗ ಮಲ್ಟಿ ಲೀಪ್ ವೆಂಚರ್ಸ್ ಹೆಸರಿನ ಕಂಪನಿಯ ಮಾರ್ಕೆಟಿಂಗ್ ಕಛೇರಿಯಲ್ಲಿ ಮಣಿಕಾ ಮತ್ತು ಸುಧೀರ್ ಎಂಬುವವರು ಆನಂದ್ ಅವರಿಗೆ ಎಲ್ಲಾ ವಿವರಗಳನ್ನು ನೀಡಿದ್ದಾರೆ. ಆನಂದ್ ತಾನು ಈ ಬಗ್ಗೆ ನಿರ್ಧಾರ ತೆಗೆದುಕೊಂಡು ಹಿಂದಿರುವುದಾಗಿ ತಿಳಿಸಿ ಅಲ್ಲಿಂದ ಹೊರಟಿದ್ದಾರೆ.
ಆದರೆ, ಮಣಿಕಾ ಮತ್ತು ಸುಧೀರ್ ಅವರಿಗೆ ಕರೆ ಮಾಡಿ ಅತ್ಯಾಕರ್ಷಕ ಸಾಲ ಯೋಜನೆಗಳ ಆಮಿಷ ಒಡ್ಡಿದ್ದಾರೆ. ಈ ಆಫರ್ನಿಂದ ಆಕರ್ಷಿತರಾದ ಅವರು ನಿವೇಶನ ಖರೀದಿಸಲು ಒಪ್ಪಿಕೊಂಡಿದ್ದಾರೆ. ಮಾತುಕತೆಯ ನಂತರ 70 ಲಕ್ಷ ರೂ.ಗೆ ಒಪ್ಪಂದವನ್ನು ಅಂತಿಮಗೊಳಿಸಲಾಯಿತು. ಸೆಪ್ಟೆಂಬರ್ 2020 ಮತ್ತು ನವೆಂಬರ್ 2020 ರ ನಡುವೆ, ನಟ ಅವರಿಗೆ ನಾಲ್ಕು ಕಂತುಗಳಲ್ಲಿ 18.5 ಲಕ್ಷ ರೂ. ನೀಡಿದ್ದಾರೆ.
ಮಾಸ್ಟರ್ ಆನಂದ್ ಹಾಗು ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಖರಾರು ಪತ್ರವನ್ನೂ ಕಂಪನಿ ಮಾಡಿಕೊಟ್ಟಿತ್ತು. ಈ ನಡುವೆ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿತ್ತು ಕಂಪನಿ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ನೀಡಲಿಲ್ಲ ಎಂದು ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.
ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್ಗಳು ಮತ್ತು ನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ, 2019 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದಾರೆ.