ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಅವರು ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್ ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಘೋಷಿಸಿದೆ.
ಮೇಲ್ಮನೆಯ 10 ಸದಸ್ಯರು ಆರು ವರ್ಷಗಳ ತಮ್ಮ ಅವಧಿಯನ್ನು ಪೂರ್ಣಗೊಳಿಸಿದ್ದು, ಜುಲೈ 28 ರಿಂದ ಆಗಸ್ಟ್ 18 ರ ನಡುವೆ ನಿವೃತ್ತರಾಗುತ್ತಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಜುಲೈ 6 ರಂದು ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಾಗುವುದು. ಜುಲೈ 13 ನಾಮಪತ್ರಗಳನ್ನು ಕೊನೆಯ ದಿನಾಂಕವಾಗಿದೆ. ಉಮೇದುವಾರಿಕೆಗಳನ್ನು ಹಿಂಪಡೆಯಲು ಕೊನೆಯ ದಿನಾಂಕ ಜುಲೈ 17. ಜುಲೈ 24 ರಂದು ಮತದಾನ ಮತ್ತು ಎಣಿಕೆ ನಡೆಯಲಿದೆ. ಏಪ್ರಿಲ್ 11 ರಂದು ತೃಣಮೂಲ ಕಾಂಗ್ರೆಸ್ ಸಂಸದ ಲುಯಿಜಿನ್ಹೋ ಜೋಕ್ವಿಮ್ ಫಲೈರೊ ಅವರು ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆಯು ಇದೇ ದಿನ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.
ಯಾವ್ಯಾವ ಸದಸ್ಯರ ಅವಧಿ ಪೂರ್ಣಗೊಳ್ಳುತ್ತಿದೆ:
ಜೈಶಂಕರ್, ದಿನೇಶ್ಚಂದ್ರ ಜೆಮಲ್ಭಾಯ್ ಅನವಾಡಿಯಾ ಮತ್ತು ಲೋಖಂಡವಾಲಾ ಜುಗಲ್ಸಿನ್ಹ್ ಮಾಥುರ್ಜಿ ಗುಜರಾತ್ನ ಮೂವರು ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದಾರೆ. ಈ ಮೂವರು ಸದಸ್ಯರ ಅವಧಿ ಆಗಸ್ಟ್ 18 ರಂದು ಕೊನೆಗೊಳ್ಳಲಿದೆ. ಬಿಜೆಪಿ ರಾಜ್ಯಸಭಾ ಸದಸ್ಯ ವಿನಯ್ ಡಿ. ತೆಂಡೂಲ್ಕರ್ ಅವರ ಅವಧಿ ಜುಲೈ 28 ರಂದು ಕೊನೆಗೊಳ್ಳಲಿದೆ ತೃಣಮೂಲ ಕಾಂಗ್ರೆಸ್ ಸಂಸದರಾದ ಡೆರೆಕ್ ಒ’ಬ್ರಿಯಾನ್, ಡೋಲಾ ಅವರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಸೇನ್, ಸುಶ್ಮಿತಾ ದೇವ್, ಶಾಂತಾ ಛೆಟ್ರಿ ಮತ್ತು ಸುಖೇಂದು ಶೇಖರ್ ರೇ ಅವರ ಸ್ಥಾನಗಳಿಗಾಗಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ ಅವರ ಅವಧಿಯೂ ಆಗಸ್ಟ್ 18 ರಂದು ಕೊನೆಗೊಳ್ಳಲಿದೆ. ಈ ಸ್ಥಾನಕ್ಕೂ ಜುಲೈ 24 ರಂದೇ ಚುನಾವಣೆ ನಡೆಯಲಿದೆ.