ದ್ವೇಷವನ್ನು ಸೃಷ್ಟಿಸುವ ಶಕ್ತಿಗಳಿಗೆ ಪ್ರಾಮುಖ್ಯತೆ ನೀಡಬೇಡಿ
ನಾವೆಲ್ಲರೂ ವಿವಿಧ ಧರ್ಮ ಮತ್ತು ಜಾತಿಗಳಿಗೆ ಸೇರಿದವರು ಆದರೆ ನಾವೆಲ್ಲರೂ ಮನುಷ್ಯರು ಎಂದು ಬಕ್ರೀದ್ ಹಬ್ಬದ ಪ್ರಯುಕ್ತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು
ಸಿದ್ದರಾಮಯ್ಯ ಹೇಳಿದರು.
![Steps to get rice from various sources: Cm Siddaramaiah](https://kannada.verito.today/wp-content/uploads/2023/06/C-M-Siddramayya-300x188.png)
ನಮ್ಮೊಳಗೆ ದ್ವೇಷವನ್ನು ಸೃಷ್ಟಿಸುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಇದನ್ನು ಉದ್ದೇಶಪೂರ್ವಕವಾಗಿ ಮಾಡುತ್ತವೆ. ನಾವು ಅದಕ್ಕೆ ಯಾವುದೇ ಪ್ರಾಮುಖ್ಯತೆ ನೀಡಬಾರದು. ಜನರು ಪ್ರೀತಿ ಮತ್ತು ವಿಶ್ವಾಸದಿಂದ ಮನುಷ್ಯರಂತೆ ಬದುಕುವ ವಾತಾವರಣವನ್ನು ನಾವು ಸೃಷ್ಟಿಸಬೇಕು. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನರೂ ಅಭಿವೃದ್ಧಿ ಹೊಂದಬೇಕು. ದೇವರು ಎಲ್ಲರನ್ನೂ ಆಶೀರ್ವದಿಸಲಿ ಮತ್ತು ಅವರು ಮನುಷ್ಯರಾಗಿ ಬದುಕಲಿ ಎಂದು ಅವರು ಹೇಳಿದರು.
ರಾಜ್ಯದ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಸಿಎಂ, ಬಕ್ರೀದ್ ತ್ಯಾಗದ ಸಂಕೇತವಾಗಿದೆ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಅವರು ಹೇಳಿದರು.
ಗೃಹಲಕ್ಷ್ಮಿ ಯೋಜನೆಗೆ ಯಾವುದೇ ಶುಲ್ಕ ನೀಡುವ ಅಗತ್ಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರ ಗೃಹಲಕ್ಷ್ಮಿ ಯೋಜನೆಗೆ ಒಂದು ರೂಪಾಯಿಯೂ ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆ ವೇಳೆ ಇರುವ 20 ರೂ. ಹಣವನ್ನು ಸರ್ಕಾರವೇ ಭರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಿದ್ದಾರೆ.
ರಾಜ್ಯದ ಹಲವೆಡೆ ಗೃಹಲಕ್ಷ್ಮಿ ಯೋಜನೆಯ ನಕಲಿ ಅರ್ಜಿಗೆ 150 ರೂ. ಶುಲ್ಕ ವಸೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಹೆಬ್ಬಾಳ, ಬಳ್ಳಾರಿಯಲ್ಲಿ ಈ ರೀತಿ ಪ್ರಕರಣ ನಡೆದಿರುವುದು ನನಗೂ ಬೆಳಗ್ಗೆಯೇ ಮಾಹಿತಿ ಬಂದಿದೆ. ನನ್ನ ಎಲ್ಲ ಇಲಾಖೆಯ ಸಿಬ್ಬಂದಿಗೂ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಚರ್ಚೆ ಮತ್ತೆ ಸುದ್ದಿಯಾಗಿದ್ದು, ಈಗಾಗಲೇ ಸಹಜ ಸಾವಲ್ಲ, ಕೊಲೆ ಎಂದು ಬಹುತೇಕ ಮಂದಿ ಹೇಳುತ್ತಿದ್ದು, ಆದ್ರೆ ಸಾವು ಇನ್ನೂ ನಿಗೂಢವಾಗಿಯೇ ಉಳಿದಿದೆ.2020 ಜೂನ್ 14ರಂದು ನಿಧನರಾದ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣ ಸದ್ಯ ಸಿಬಿಐ ಅಂಗಳದಲ್ಲಿದೆ. ಆದರೆ ಇನ್ನೂ ಕಾರಣ ಬಹಿರಂಗವಾಗಿಲ್ಲ.
ಇದೀಗ ಮೂರು ವರ್ಷಗಳ ಬಳಿಕ ಸಾವಿಗೆ ಟ್ವಿಸ್ಟ್ ಸಿಕ್ಕಿದೆ. ನಟನ ಸಾವಿನ ಮೂರು ವರ್ಷಗಳ ಬಳಿಕ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಂಡ್ನವೀಸ್ ತಿಳಿಸಿದ್ದಾರೆ.
ದಿಶಾ ಸಾಲಿಯಾನ್ ಹಾಗೂ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯ ಗಳು ಲಭ್ಯವಾಗಿವೆ. ಆದರೆ ಆ ಸಾಕ್ಷ್ಯಗಳು ನಿಖರವೇ, ನಂಬಲರ್ಹವೇ, ಸತ್ಯವಾದುವೇ ಎಂಬ ಪರಿಶೀಲನೆ ನಡೆಯುತ್ತಿವೆ. ಕೆಲವರ ಹೇಳಿಕೆ ದಾಖಲಿಸಿಕೊಳ್ಳುವುದು ಹಾಗೂ ಸಾಕ್ಷ್ಯಗಳ ಪರಿಶೀಲನೆ ಬಾಕಿ ಇದೆ ಎಂದು ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ಹಾಗೂ ದಿಶಾ ಸಾಲಿಯಾನ್ ಪ್ರಕರಣಗಳು ಇನ್ನೂ ತನಿಖೆ ಹಂತದಲ್ಲಿವೆ. ಈ ಪ್ರಕರಣಗಳ ಬಗ್ಗೆ ಮಹತ್ವದ ಹೇಳಿಕೆಯನ್ನು ಆದಷ್ಟು ಶೀಘ್ರದಲ್ಲಿ ಸೂಕ್ತವಾದ ಸಮಯವನ್ನು ನೋಡಿಕೊಂಡು ಜನರ ಮುಂದೆ ತರುತ್ತೇವೆ ಎಂದು ದೇವೇಂದ್ರ ಫಂಡ್ನವೀಸ್ ತಿಳಿಸಿದ್ದಾರೆ.
ಈ ಗ್ಯಾರೆಂಟಿಗಳು ಲೋಕಸಭಾ ಚುನಾವಣೆಯ ವರೆಗೆ ಮಾತ್ರವೇ ಅಸ್ಥಿತ್ವದಲ್ಲಿರಲಿವೆ: ಆರ್ ಅಶೋಕ
ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳು ಮುಂದಿನ ವರ್ಷದ ಲೋಕಸಭಾ ಚುನಾವಣೆಯವರೆಗೆ ಜಾರಿಯಲ್ಲಿ ಉಳಿಯಲಿವೆ ಎಂದು ಮಾಜಿ ಉಪಮುಖ್ಯ ಉಪ ಮುಖ್ಯಮಂತ್ರಿ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳ ಸಾಧನೆಗಳನ್ನು ತಿಳಿಸುವ ಕಾರ್ಯಕ್ರಮವನ್ನು ಬೆಂಗಳೂರಿನ ಗೌಡ ಸಮಾಜ ಸಭಾಂಗಣದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಮಾತ್ರ ಜಾರಿಯಾಗಿದ್ದು, ಅದೂ ಸಮರ್ಪಕವಾಗಿಲ್ಲ. ಇನ್ನು ಪ್ರತಿ ಮನೆಯ ಮಹಿಳೆಯರಿಗೆ 2 ಸಾವಿರ ರೂ., ನಿರುದ್ಯೋಗಿಗಳಿಗೆ 3 ಸಾವಿರ,ಪ್ರತಿ ಮನೆಗೆ 200 ಯೂನಿಟ್ ಗ್ಯಾರಂಟಿಗಳು ಇನ್ನೂ ಜಾರಿಯಾಗಿಲ್ಲ. ಇವೆಲ್ಲ ಗೊಂದಲದ ಗೂಡಾಗಿದೆಯೆಂದು ಟೀಕಿಸಿದರು.