ಮಡಿಕೇರಿ: ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಮತ್ತಾರಿ ಸೇತುವೆಯು ಮಳೆಯಲ್ಲಿ ಮುಳುಗಡೆಯಾಗಿದೆ. ಇಲ್ಲಿ ಒಟ್ಟು 15 ಮನೆಗಳಿವೆ. 65 ಜನರು ವಾಸವಾಗಿದ್ದು, ಇಲ್ಲಿನ ಸೇತುವೆಯನ್ನು ಮಡಿಕೇರಿ ತಹಶೀಲ್ದಾರ್ ಕಿರಣ್ ಗೌರಯ್ಯ ಪರಿಶೀಲಿಸಿದರು.
ಹಾಗೆಯೇ ಭಾಗಮಂಡಲ ತ್ರಿವೇಣಿ ಸಂಗಮ, ಭಾಗಮಂಡಲ-ನಾಪೋಕ್ಲು ರಸ್ತೆಗೆ ಬಂದಿರುವ ನೀರಿನ ಮಟ್ಟವನ್ನು ವೀಕ್ಷಿಸಿದರು.
ಭಾಗಮಂಡಲ ಗ್ರಾಮದಲ್ಲಿರುವ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ನಡೆಸಲು ಸಿದ್ಧತೆ ಯಾಗಿದ್ದು, ಹೆಚ್ಚಿನ ಮಳೆ ಆದಲ್ಲಿ ಕಾಳಜಿ/ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.
ಭಾಗಮಂಡಲ- ನಾಪೋಕ್ಲು ರಸ್ತೆಯ ಮೇಲೆ ಅಂದಾಜು 2 ಅಡಿ ನೀರು ಬಂದಿದೆ. ಗೃಹ ರಕ್ಷಕ ದಳದ ತಂಡವು ಬೋಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಅವರು ತಿಳಿಸಿದ್ದಾರೆ.