ಈ ರೌಂಡ್ ಅಪ್ ನಲ್ಲಿದೆ ಪ್ರಮುಖ ಸುದ್ದಿಗಳ ಸಂಪೂರ್ಣ ಮಾಹಿತಿ
ರಾಜ್ಯ ಸುದ್ದಿಗಳು
ಕರಾವಳಿಯಲ್ಲಿ ಭಾರಿ ಮಳೆ, ಭೂಕುಸಿತದಲ್ಲಿ ಮಹಿಳೆ ಸಾವು
ಕರ್ನಾಟಕದ ದಕ್ಷಿಣ ಕನ್ನಡ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರುದಿದ್ದು, ಭೂಕುಸಿತ ಸಂಭವಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶುಕ್ರವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ನಂದಾವರದಲ್ಲಿ ಭಾರೀ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು 47 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಮಹಮ್ಮದ್ ಅವರ ಪತ್ನಿ ಜರೀನಾ ಎಂದು ಗುರುತಿಸಲಾಗಿದೆ. ಆಕೆಯ ಮಗಳು ಸಫಾ (20) ಅವರನ್ನು ಅಗ್ನಿಶಾಮಕ ದಳ, ರಕ್ಷಣಾ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಅವಶೇಷಗಳ ಅಡಿಯಿಂದ ರಕ್ಷಿಸಿದ್ದಾರೆ.
ದಕ್ಷಿಣ ಕನ್ನಡ, ಮಂಗಳೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ನೀರು ತುಂಬಿ ಹರಿಯಿತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಪಡುಬಿದ್ರಿ ದೇವಸ್ಥಾನದೊಳಗೆ ನೀರು ನುಗ್ಗಿ ಸಂಕಷ್ಟ ಸೃಷ್ಟಿ
ಭಾರೀ ಮಳೆಯಿಂದಾಗಿ ಪಡುಬಿದ್ರಿ ದೇವಸ್ಥಾನಕ್ಕೆ ನೀರು ನುಗ್ಗಿದ್ದು, ಮಂಗಳೂರು ಪಡುಬಿದ್ರಿ ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನೀರು ತುಂಬಿದೆ. ಇದರ ಪರಿಣಾಮ ಭಕ್ತರು ಪರದಾಡುವಂತಾಗಿದೆ.
ಕಳೆದ ಮೂರು ವರ್ಷಗಳಲ್ಲಿ ದೇವಸ್ಥಾನಕ್ಕೆ ನೀರಿನ ಸಮಸ್ಯೆ ಹೆಚ್ಚಾಗಿದೆ. ಸರಿಯಾದ ಚರಂಡಿಗಳಿಲ್ಲದೆ, ರಸ್ತೆ ನೀರು, ಹೋಟೆಲ್ ನೀರು, ಹೋಟೆಲ್ ನೀರು, ಮಾರುಕಟ್ಟೆಯಿಂದ ಬರುವ ಕಲುಷಿತ ನೀರು ದೇವಾಲಯದ ಒಳಗೆ ಬರುತ್ತಿದೆ.
ಪ್ರಧಾನಿ ಮೋದಿ ವಿರುದ್ದ ನಿಂದನೀಯ ಮಾತುಗಳು ಅವಹೇಳನಕಾರಿ, ಆದರೆ ದೇಶದ್ರೋಹವಲ್ಲ: ಹೈಕೋರ್ಟ್
ಪ್ರಧಾನಿ ಮೋದಿ ವಿರುದ್ದ ನಿಂದನೀಯ ಮಾತುಗಳು ಅವಹೇಳನಕಾರಿ, ಆದರೆ ದೇಶದ್ರೋಹವಲ್ಲ ಎಂದು ಹೈ ಕೋರ್ಟ್ ಹೇಳಿದೆ.
ಶಾಲಾ ಆಡಳಿತ ಮಂಡಳಿ ವಿರುದ್ದದ ದೇಶದ್ರೋಹದ ಪ್ರಕರಣದ ವಿಚಾರಣೆ ವೇಳೆ ಹೈ ಕೋರ್ಟ್ ಇದು ಅವಹೇಳನಕಾರಿ ಹೇಳಿಕೆ ಮತ್ತು ಬೇಜವಾಬ್ದಾರಿಯುತ ಪದ ಎಂದು ಹೇಳಬಹುದು ಆದರೆ ದೇಶದ್ರೋಹ ಎಂದು ಹೇಳಲಾಗುವುದಲ್ಲ ಎಂದಿದೆ.
ಕಲಬುರ್ಗಿ ಹೈಕೋರ್ಟ್ ಪೀಠವು ಬೀದರ್ನ ಶಾಹೀನ್ ಶಾಲೆಯ ಎಲ್ಲಾ ಮ್ಯಾನೇಜ್ಮೆಂಟ್ ನ ಅಲ್ಲಾವುದ್ದೀನ್, ಅಬ್ದುಲ್ ಖಲೀಕ್, ಮಹಮ್ಮದ್ ಬಿಲಾಲ್ ಇನಾಮದಾರ್ ಮತ್ತು ಮಹಮ್ಮದ್ ಮೆಹತಾಬ್ ವಿರುದ್ಧ ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ.
ಪ್ರಧಾನಿಗೆ ಚಪ್ಪಲಿಯಿಂದ ಹೊಡೆಯಬೇಕು ಎಂಬ ನಿಂದನೆಯ ಮಾತುಗಳು ಅವಹೇಳನಕಾರಿ ಮಾತ್ರವಲ್ಲದೆ, ಬೇಜವಾಬ್ದಾರಿಯೂ ಆಗಿದೆ ಎಂದಿದೆ.
ಕಾಂಗ್ರೆಸ್ ನದ್ದು ಅವೈಜ್ಞಾನಿಕ, ಆತಾರ್ಕಿಕವಾದ ನಿಲುವು: ಶಾಸಕ ಎಸ್ ಸುರೇಶ್
ಇಂದು ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ನ ಬಗ್ಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಇನ್ನು ಚುನಾವಣಾ ಪ್ರಚಾರದ ಗುಂಗಿನಿಂದ ಹೊರ ಬಂದಿಲ್ಲ ಎಂದು ಟೀಕಿಸಿದೆ.
ಈ ಬಗ್ಗೆ ಶಾಸಕರಾದ ಎಸ್. ಸುರೇಶ್ ಕುಮಾರ್ ಮಾಧ್ಯಮಗಳಿಗೆ ಪ್ರಕಟಣೆ ನೀಡಿದ್ದು, ಹಿಂದಿನ ಸರ್ಕಾರವನ್ನು ಹಳಿಯುವುದರಲ್ಲಿ, ಹಿಂದಿನ ಆಡಳಿತವನ್ನು ಟೀಕಿಸುವುದರಲ್ಲಿ, ಡಬಲ್ ಇಂಜಿನ್ ಸರ್ಕಾರವನ್ನು ವ್ಯಂಗ್ಯ ಮಾಡುವುದರಲ್ಲಿ ಈ ಮುಂಗಡಪತ್ರ ತನ್ನ ಶೇಕಡಾ 60 ಕ್ಕೂ ಹೆಚ್ಚು ಭಾಗವನ್ನು ಮೀಸಲಿಟ್ಟಿದೆ.
ಈ ಪಠ್ಯಕ್ರಮ ವ್ಯವಸ್ಥೆ ಎನ್ನುವುದು ಒಂದಿರುತ್ತದೆ, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಅಂತ ಅದಕ್ಕೆ ಅನುಗುವಾಗಿ ಪರಾಮರ್ಶೆಗೊಳಗಾಗುತ್ತಿರುತ್ತದೆ. ರಚನೆಯಾಗಬೇಕಿರುತ್ತದೆ. ರಾಜ್ಯ ಪಠ್ಯಕ್ರಮಗಳು ಅದರ ನಿರಂತರವಾಗಿ ಆಧಾರದಲ್ಲಿಯೇ ಪಠ್ಯವಸ್ತುಗಳು ಆಧಾರದಲ್ಲೇ ರೂಪಿಸಲಾಗುತ್ತದೆ. ಅದರಲ್ಲಿನ ವ್ಯವಸ್ಥೆಯನ್ನು ಯಾವುದೇ ನೀತಿ ನಿರೂಪಕರು ಗೌರವಿಸಬೇಕಾಗುತ್ತದೆ ಎನ್ನುವುದನ್ನು ಆಡಳಿತ ಪಕ್ಷ ನೆನಪಿನಲ್ಲಿಡಬೇಕು ಎಂದಿದೆ.
ಅವೈಜ್ಞಾನಿಕ, ಆತಾರ್ಕಿಕವಾದ ರಾಜಕೀಯ ನಿಲುವುಗಳಿಗೆ ನಮ್ಮ ಭವಿಷ್ಯ ರೂಪಿಸುವ ಮಕ್ಕಳು ಬಲಿಯಾಗದಿರಲಿ ಎಂದಿದ್ದಾರೆ.
ಜನರಿಗೆ ಹೊರೆಯಾಗದಂತೆ ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ತಮ್ಮ 14 ನೇ ಆಯವ್ಯಯ ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಗೆ 13,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೆಚ್ಚಳ ಮೂಲಕ, 8000 ಕೋಟಿ ರೂ. ಹೆಚ್ಚುವರಿ ಸಾಲದ ಮೂಲಕ ಹಾಗೂ ಉಳಿದ ಸಂಪನ್ಮೂಲವನ್ನು ಯೋಜನೆಗಳ ಆದ್ಯತೆಯನ್ನು ನಿಗದಿಪಡಿಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿಲ್ಲ ಎಂದರು.
ಈ ಆಯವ್ಯಯಲ್ಲಿ 2,50,933 ಕೋಟಿ ರೂ. ರಾಜಸ್ವ ವೆಚ್ಚ, ಬಂಡವಾಳ ವೆಚ್ಚ 54,374 ಕೋಟಿ ರೂ.ಗಳಾಗಿದ್ದು, 2022-23 ಹೋಲಿಸಿದರೆ ಶೇ.23 ರಷ್ಟು ರಾಜಸ್ವ ವೆಚ್ಚ ಹಾಗೂ ಶೇ.16 ರಷ್ಟು ಬಂಡವಾಳ ವೆಚ್ಚ ಹೆಚ್ಚಾಗುತ್ತದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ 2021-22 ರಲ್ಲಿ ವಿತ್ತೀಯ ಕೊರತೆ 14,699.14 ಕೋಟಿ ರೂ.ಗಳಷ್ಟಿತ್ತು. ನಮ್ಮ ಸರ್ಕಾರದ ರಾಜಸ್ವ ಕೊರತೆ 12,523 ಕೋಟಿ ರಷ್ಟಿದೆ, ವಿತ್ತೀಯ ಕೊರತೆ 66,646 ಕೋಟಿ ರೂ. ಇದು ಜಿಎಸ್ ಡಿಪಿಯ ಶೇ. 2.6 ರಷ್ಟಿದೆ. ರಾಜ್ಯದ ಹೊಣೆಗಾರಿಕೆ 5,71,665 ಕೋಟಿ ರೂ.ಗಳಷ್ಟಿದ್ದು, ಇದು ಜಿಎಸ್ ಡಿಪಿ ಶೇ. 22.3 ರಷ್ಟಿದೆ. 2023-24 ಕ್ಕೆ ರಾಜ್ಯವು ಪಡೆಯುವ ಸಾಲ 85,818 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಎಂದರು.
ರಾಷ್ಟ್ರೀಯ ಸುದ್ದಿಗಳು
ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ
ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್ ಗಢ ಮತ್ತು ರಾಜಸ್ಥಾನ ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ.
ಕೇಂದ್ರ ಸಚಿವ ಭೂಪೇಂದ್ರ ಯಾದವ್ ಗೆ ಮಧ್ಯಪ್ರದೇಶದ ಉಸ್ತುವಾರಿ ಮಾಡಲಾಗಿದೆ.
ರಾಜಸ್ಥಾನಕ್ಕೆ ಚುನಾವಣಾ ಉಸ್ತುವಾರಿಗಳಾಗಿ ಕೇಮದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಇಬ್ಬರು ಸಹ- ಇನ್ ಚಾರ್ಜ್ ಗಳಾಗಿ ನಿತಿನ್ ಪಟೇಲ್ ಮತ್ತು ಕುಲದೀಪ್ ಬಿಷ್ಣೋಯ್ ಅವರನ್ನು ನೇಮಕ ಮಾಡಲಾಗಿದೆ.
ತೆಲಂಗಾಣದ ಉಸ್ತುವಾರಿಯಾಗಿ ಕೇಂದ್ರದ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಛತ್ತೀಸ್ ಗಢದಲ್ಲಿ ಪಕ್ಷದ ಹಿರಿಯ ನಾಯಕ ಓಂ ಮಾಥುರ್ ಅವರು ಪಕ್ಷದ ಚುನಾವಣಾ ಉಸ್ತುವಾರಿಯಾಗಲಿದ್ದಾರೆ.
ತೆಲಂಗಾಣದಲ್ಲಿ ರೈಲು ಅವಘಡ: ನಾಲ್ಕು ಬೋಗಿಗಳು ಬೆಂಕಿಗೆ ಆಹುತಿ
ಪಶ್ಚಿಮ ಬಂಗಾಳದ ಸಿಕಂದರಾಬಾದ್ ಮತ್ತು ಹೌರಾ ನಡುವೆ ಸಂಚರಿಸುತ್ತಿದ್ದ ಫಲಕ್ನುಮಾ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12703) ನ ನಾಲ್ಕು ಬೋಗಿಗಳು ಶುಕ್ರವಾರ ತೆಲಂಗಾಣದ ಯಾದಾದ್ರಿ-ಭುವನಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಪಗಿಡಿಪಲ್ಲಿ ಮತ್ತು ಬೊಮ್ಮಾಯಿಪಲ್ಲಿ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ.
ಬ್ಯಾಟರಿಯಿಂದ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಇದು ಸಂಭವಿಸಿದೆ ಎಂದು ವರದಿಯಾಗಿದೆ.
ಒಂದು ಕೋಚ್ನಿಂದ ಬೆಂಕಿ, ಹೊಗೆ ಕಾಣಿಸುತ್ತಿದ್ದಂತೆ ಅಕ್ಕಪಕ್ಕದ ಬೋಗಿಗಳಲ್ಲಿದ್ದ ಹಲವಾರು ಪ್ರಯಾಣಿಕರು ಭಯಭೀತರಾಗಿ ರೈಲಿನಿಂದ ಸುರಕ್ಷಿತವಾಗಿ ಹೊರಬಂದರು. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ನಂತರ, ಬೋಗಿಗಳನ್ನು ಬೇರ್ಪಡಿಸಿ ಸುರಕ್ಷತಾ ತಪಾಸಣೆಯನ್ನು ಖಾತ್ರಿಪಡಿಸಿದ ನಂತರ, ಅಧಿಕಾರಿಗಳು ರೈಲನ್ನು ಚಲಾವಣೆಗೆ ಫ್ಲ್ಯಾಗ್ ಆಫ್ ಮಾಡಿದರು.