ಚಿಕ್ಕೋಡಿ: ರಾಜ್ಯದ ಇತಿಹಾಸದಲ್ಲಿಯೇ ಭೀಕರ ಎಂಬ ರೀತಿಯಲ್ಲಿ ದುಷ್ಕರ್ಮಿಗಳು ಜೈನ ಮುನಿಗಳೊಬ್ಬರ ಹತ್ಯೆ ಮಾಡಿದ್ದಾರೆ. ಬರ್ಬರವಾಗಿ ಹತ್ಯೆಗೀಡಾದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಅವರಿಂದ ಸಾಲ ಪಡೆದಿದ್ದ ಆಪ್ತರಾಗಿದ್ದವರೇ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಅಲ್ಲದೆ, ಇದು ಜೈನ ಸಮುದಾಯದ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ.
ದೇಹದ ತುಂಡು ತುಂಡು ಮಾಡಿದ ಭಾಗಗಳು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಪತ್ತೆ ಆಗಿವೆ. ಸತತವಾಗಿ ಶನಿವಾರ ಬೆಳಗಿನಿಂದಲೇ ಜೆಸಿಬಿ ಮೂಲಕ ಹತ್ತು ಘಂಟೆಗಳ ಕಾರ್ಯಾಚರಣೆ ನಡೆಸಿದ ಪೋಲೀಸರು ಮೃತ ದೇಹವನ್ನು ವಶಕ್ಕೆ ಪಡೆದಿದ್ದು, ದೇಹದ ಅವಶೇಷಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಳಿಗ್ಗೆ ಆರು ಘಂಟೆಯಿಂದಲೇ ಶವದ ಹುಡುಕಾಟ ನಡೆಸಿದಾಗ ಮಧ್ಯಾಹ್ನದ ವೇಳೆಗೆ 25 ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ ಮತ್ತು ಟವೆಲ್ ಪತ್ತೆ ಆಗಿತ್ತು.
ಕೊಳವೆಬಾವಿಯನ್ನು ಅಗೆಯುತ್ತಾ ಹೋದಾಗ 30 ಅಡಿ ಆಳದಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ದೇಹದ 9 ಭಾಗಗಳು ಪತ್ತೆಯಾಗಿವೆ. ದೇಹದ ಎಲ್ಲ ಭಾಗಗಳನ್ನು ಒಂದೆಡೆ ಜೋಡಿಸಿಡಲಾಗಿದೆ. ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಕೊಲೆ ಮಾಡಿದ ಬಳಿಕ ದುಷ್ಟರು ಶವ ವಿಲೇವಾರಿಗೆ ಅನುಕೂಲಕ್ಕಾಗಿ 9 ಭಾಗವನ್ನಾಗಿ ತುಂಡರಿಸಿದ್ದಾರೆ. ಎರಡು ಕೈ, ಎರಡು ಕಾಲು, ಎರಡು ಭಾಗ ತೊಡೆ, ತಲೆಯ ಎರಡು ಭಾಗ, ಹೊಟ್ಟೆಯನ್ನು ಈ ಕ್ರೂರಿಗಳು ಪ್ರತ್ಯೇಕವಾಗಿ ಕತ್ತರಿಸಿ ಹಾಕಿದ್ದಾರೆ.
ಜೈನಮುನಿಗಳ ಮೃತದೇಹವನ್ನು ಖಟಕಬಾವಿಯಿಂದ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಶನಿವಾರವೇ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಭಾನುವಾರ ಹಿರೇಕೋಡಿಯ ನಂದಿಪರ್ವತ ಆಶ್ರಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಭಕ್ತಾದಿಗಳು ನಿರ್ಧಾರ ಮಾಡಿದ್ದಾರೆ. ಸರಳ ಸಜ್ಜನ ಸ್ವಾಭಾವದವರಾಗಿದ್ದ ಮುನಿಗಳ ಬರ್ಬರ ಹತ್ಯೆ ಇಡೀ ಗ್ರಾಮವನ್ನು, ಜೈನ ಸಮುದಾಯವನ್ನೂ ಆಕ್ರೋಶಿತರನ್ನಾಗಿ ಮಾಡಿದೆ.
ಜೈನಮುನಿಗಳನ್ನು ಕೊಲ್ಲಲು ಈತ ಸಾಕಷ್ಟು ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದ ಹಂತಕರು ಅವರನ್ನು ಕರೆಂಟ್ ಶಾಕ್ ನೀಡಿ ಕೊಂದಿದ್ದಾರೆ ಎಂದು ಜೈನಮುನಿ ಆಪ್ತ ಪ್ರದೀಪ್ ನಂದಗಾಂವ್ ಆರೋಪ ಮಾಡಿದ್ದಾರೆ. ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಇನ್ನು ಜೈನಮುನಿಗಳು ಎಲ್ಲೇ ಹೋಗಬೇಕಿದ್ದರೂ ಪಿಂಚಿ, ಕಮಂಡಲ ತಗೆದುಕೊಂಡು ಹೋಗುವ ಪ್ರತೀತಿ ಇದೆ. ಆದರೆ ಪಿಂಚಿ, ಕಮಂಡಲ ಹಾಗೂ ಮೊಬೈಲ್ ಎಲ್ಲವೂ ಕೋಣೆಯಲ್ಲಿಯೇ ಇತ್ತು. ಹೀಗಾಗಿ ಭಕ್ತರಲ್ಲಿ ಆತಂಕ ಹೆಚ್ಚಿತ್ತು. ನಾಪತ್ತೆ ಆಗಿದ್ದ ಮುನಿಗಳ ಹುಡುಕಾಟದಲ್ಲಿ ಕೊಲೆ ಆರೋಪಿಯೂ ಸೇರಿಕೊಂಡಿದ್ದ.
ಮುನಿಗಳ ಭಿಕರ ಹತ್ಯೆಗೆ ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿ ಕಣ್ಣೀರು ಹಾಕಿದ್ದಾರೆ. ಶಾಂತಿಪ್ರಿಯ ಸಮಾಜದ ಸ್ವಾಮೀಜಿಯ ಬರ್ಬರ ಹತ್ಯೆ ತೀವ್ರ ನೋವು ತಂದಿದೆ. ರಾಜ್ಯದ ಮುಖ್ಯ ಮಂತ್ರಿಗಳು ಇದುವರೆಗೂ ಕನಿಷ್ಟ ಸಂತಾಪ ಸೂಚಿಸದಿರುವುದು ಆಘಾತವಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಸರ್ಕಾರಕ್ಕೆ ನಮ್ಮಂತ ಅಲ್ಪಸಂಖ್ಯಾತರು ಬೇಡವಾಗಿದೆ. ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಆರೋಪಿಗಳಿಗೆ ಶಿಕ್ಷೆ ಆಗಬೇಕು. ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನಾಹಾರ ತ್ಯಾಗ ಮಾಡುತ್ತೇನೆ. ಪ್ರಾಣ ಹೋಗುವವರೆಗೆ ಸಲ್ಲೇಖನ ಮಾಡುತ್ತೇನೆ ಎಂದು ಸ್ವಾಮೀಜಿ ಪಟ್ಟುಹಿಡಿದಿದ್ದಾರೆ.
ಮೂಲಗಳ ಪ್ರಕಾರ ಒಬ್ಬ ಆರೋಪಿ ಸ್ವಾಮೀಜಿಗಳ ಭಕ್ತನಂತೆ ಹಲವು ವರ್ಷಗಳಿಂದ ನಟಿಸಿ ವಿಶ್ವಾಸ ಗಳಿಸಿಕೊಂಡು ಆರು ಲಕ್ಷ ರೂಪಾಯಿಗಳ ಸಾಲ ಪಡೆದಿದ್ದ. ಸ್ವಾಮೀಜಿಯು ಸಾಲವನ್ನು ವಾಪಾಸ್ ಕೇಳಿದಾಗ ಹತ್ಯೆಗೆ ಸಂಚು ರೂಪಿಸಿ ಇನ್ನೊಬ್ಬ ಸಹಚರನೊಂದಿಗೆ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಈ ಕುರಿತು ಆಘಾತ ಮತ್ತು ದುಖಃ ವ್ಯಕ್ತಪಡಿಸಿದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರು ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ. ಮುನಿಗಳಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಅಂತಾ ಗೊತ್ತಿಲ್ಲ. ಕೃತ್ಯ ಎಸಗಿದವರ ಬಂಧನ ಆಗಿರೋದು ತಿಳಿದುಬಂದಿದೆ. ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಮುನಿಗಳಿಗೆ ಸರ್ಕಾರ ರಕ್ಷಣೆ ಕೊಡಬೇಕಿದೆ ಎಂದರು.
ಜೈನಮುನಿಗಳನ್ನು ಕೊಲ್ಲಲು ಈತ ಸಾಕಷ್ಟು ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದ ಹಂತಕರು ಅವರನ್ನು ಕರೆಂಟ್ ಶಾಕ್ ನೀಡಿ ಕೊಂದಿದ್ದಾರೆ ಎಂದು ಜೈನಮುನಿ ಆಪ್ತ ಪ್ರದೀಪ್ ನಂದಗಾಂವ್ ಆರೋಪ ಮಾಡಿದ್ದಾರೆ. ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. ಇನ್ನು ಜೈನಮುನಿಗಳು ಎಲ್ಲೇ ಹೋಗಬೇಕಿದ್ದರೂ ಪಿಂಚಿ, ಕಮಂಡಲ ತಗೆದುಕೊಂಡು ಹೋಗುವ ಪ್ರತೀತಿ ಇದೆ. ಆದರೆ ಪಿಂಚಿ, ಕಮಂಡಲ ಹಾಗೂ ಮೊಬೈಲ್ ಎಲ್ಲವೂ ಕೋಣೆಯಲ್ಲಿಯೇ ಇತ್ತು. ಹೀಗಾಗಿ ಭಕ್ತರಲ್ಲಿ ಆತಂಕ ಹೆಚ್ಚಿತ್ತು. ನಾಪತ್ತೆ ಆಗಿದ್ದ ಮುನಿಗಳ ಹುಡುಕಾಟದಲ್ಲಿ ಕೊಲೆ ಆರೋಪಿಯೂ ಸೇರಿಕೊಂಡಿದ್ದ.
ಉನ್ನತ ಪೋಲೀಸ್ ಮೂಲಗಳ ಪ್ರಕಾರ ಈ ಕೊಲೆಯಲ್ಲಿ ನಾರಾಯಣ ಮಾಳಿ ಎಂಬಾತ ಮುಖ್ಯ ಆರೋಪಿ ಆಗಿದ್ದು ಈತನ ಸಹಚರ ಹುಸೇನ್ ಡಲಾಯತ್ ಹತ್ಯೆಗೆ ಸಹಕರಿಸಿದ್ದಾನೆ. ನಾರಾಯಣ ಮಾಳಿ ಆಶ್ರಮದ ಸಮೀಪದಲ್ಲೇ ಕೃಷಿ ಭೂಮಿಯನ್ನು ಲೀಸ್ ಗೆ ಪಡೆದು ಕೃಷಿ ಮಾಡುತಿದ್ದ. ಆಗಾಗ ಮಠಕ್ಕೆ ಬಂದು ಸ್ವಾಮೀಜಿಯವರ ವಿಶ್ವಾಸವನ್ನು ಗಳಿಸಿದ್ದ. ಅಲ್ಲದೆ, ತನ್ನ ಕಷ್ಟಗಳನ್ನು ಹೇಳಿಕೊಂಡು ಆರು ಲಕ್ಷ ರೂಪಾಯಿಗಳ ಸಾಲವನ್ನೂ ಪಡೆದಿದ್ದ ಎನ್ನಲಾಗಿದೆ. ಕೊನೆಗೆ ಸ್ವಾಮೀಜಿ ಹಣವನ್ನು ವಾಪಸ್ ಕೇಳಿದಾಗ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮೊದಲಿಗೆ ವಿದ್ಯುತ್ ಶಾಕ್ ನೀಡಿ ನಂತರ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ.
ಮುನಿಗಳ ಭೀಕರ ಹತ್ಯೆಗೆ ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿ ಕಣ್ಣೀರು ಹಾಕಿದ್ದಾರೆ. ಶಾಂತಿಪ್ರಿಯ ಸಮಾಜದ ಸ್ವಾಮೀಜಿಯ ಬರ್ಬರ ಹತ್ಯೆ ತೀವ್ರ ನೋವು ತಂದಿದೆ. ರಾಜ್ಯದ ಮುಖ್ಯ ಮಂತ್ರಿಗಳು ಇದುವರೆಗೂ ಕನಿಷ್ಟ ಸಂತಾಪ ಸೂಚಿಸದಿರುವುದು ಆಘಾತವಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಸರ್ಕಾರಕ್ಕೆ ನಮ್ಮಂತ ಅಲ್ಪಸಂಖ್ಯಾತರು ಬೇಡವಾಗಿದೆ. ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಆರೋಪಿಗಳಿಗೆ ಶಿಕ್ಷೆ ಆಗಬೇಕು. ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನಾಹಾರ ತ್ಯಾಗ ಮಾಡುತ್ತೇನೆ. ಪ್ರಾಣ ಹೋಗುವವರೆಗೆ ಸಲ್ಲೇಖನ ಮಾಡುತ್ತೇನೆ ಎಂದು ಸ್ವಾಮೀಜಿ ಪಟ್ಟುಹಿಡಿದಿದ್ದಾರೆ.
ಮೂಲಗಳ ಪ್ರಕಾರ ಒಬ್ಬ ಆರೋಪಿ ಸ್ವಾಮೀಜಿಗಳ ಭಕ್ತನಂತೆ ಹಲವು ವರ್ಷಗಳಿಂದ ನಟಿಸಿ ವಿಶ್ವಾಸ ಗಳಿಸಿಕೊಂಡು ಆರು ಲಕ್ಷ ರೂಪಾಯಿಗಳ ಸಾಲ ಪಡೆದಿದ್ದ. ಸ್ವಾಮೀಜಿಯು ಸಾಲವನ್ನು ವಾಪಾಸ್ ಕೇಳಿದಾಗ ಹತ್ಯೆಗೆ ಸಂಚು ರೂಪಿಸಿ ಇನ್ನೊಬ್ಬ ಸಹಚರನೊಂದಿಗೆ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.