ನಟಿ ಮೇಘನಾ ರಾಜ್ ಬದುಕಲ್ಲಿ ಚಿರಂಜೀವಿ ಅವರು ಮೃತಪಟ್ಟ ಬಳಿಕ ಅವರು ಸಾಕಷ್ಟು ದುಃಖ ಅನುಭವಿಸಬೇಕಾಯಿತು. ಆದರೆ ರಾಯನ್ ರಾಜ್ ಸರ್ಜಾ ಜನಿಸಿದ ಬಳಿಕ ಸ್ವಲ್ಪಮಟ್ಟಿಗೆ ಅವರ ಬದುಕಲ್ಲಿ ಮತ್ತೆ ಖುಷಿ ಮೂಡಿದೆ. ಈಗ ಮೇಘನಾ ರಾಜ್ ಅವರು ಸಂತೋಷದಿಂದ ಇರುವ ಹಾಗೆ ಕಾಣಿಸುತದಷ್ಟೇ. ಅವರ ಕಷ್ಟ ಅವರಿಗೆ ಅಲ್ಲವೇ? ಆದರೆ ಈಗೀಗ ಅವರು ಚಿತ್ರರಂಗದ ಕೆಲಸಗಳಲ್ಲಿ ಅವರನ್ನ ತೊಡಗಿಕೊಂಡಿದ್ದಾರೆ. ಅವರ ‘ತತ್ಸಮ ತದ್ಭವ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.ಆ ಚಿತ್ರದ ಟೀಸರ್ ರಿಲೀಸ್ ಆಗಿ ಎಲ್ಲರ ಗಮನ ಸೆಳೆಯುತ್ತಿದೆ.
ಮೇಘನಾ ರಾಜ್ ಅವರು ‘ತತ್ಸಮ ತದ್ಭವ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಇದೆ. ಈಗಾಗಲೇ ಸಿನಿಮಾದ ಪೋಸ್ಟರ್ಗಳು ಗಮನ ಸೆಳೆದಿವೆ. ಇದು ಮಹಿಳಾ ಪ್ರಧಾನ ಸಿನಿಮಾ ಎಂಬ ಕಾರಣಕ್ಕೂ ನಿರೀಕ್ಷೆ ಹೆಚ್ಚಿರಬಹುದು.
‘ತತ್ಸಮ ತದ್ಭವ’ ಸಿನಿಮಾದ ಟೀಸರ್ ಬೀಟಲ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಆಗಿದೆ ಎಂದು ಮೇಘನಾ ರಾಜ್ ಅವರು ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಫ್ಯಾನ್ಸ್ ಈ ಪೋಸ್ಟ್ ನೋಡಿ ಶುಭ ಹಾರೈಸಿದ್ದಾರೆ. ಈ ಚಿತ್ರಕ್ಕಾಗಿ ಕಾದಿದ್ದೇವೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.ಕೆಲ ತಿಂಗಳ ಹಿಂದೆ ಚಿತ್ರತಂಡ ಶೂಟಿಂಗ್ ಪೂರ್ಣಗೊಳಿಸಿತ್ತು. ಈಗ ‘ತತ್ಸಮ ತದ್ಭವ’ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಮೇಘನಾ ರಾಜ್ ಬ್ಯುಸಿ ಆಗಿದ್ದಾರೆ.
ಇದೊಂದು ಮಿಸ್ಸಿಂಗ್ ಕೇಸ್ನ ಕಥೆ. ‘ನನ್ನ ಹೆಸರು ಆರಿಕಾ. ನನ್ನ ಪತಿ ಕಾಣೆ ಆಗಿದ್ದಾರೆ’ ಎಂದು ಮೇಘನಾ ರಾಜ್ ಬಂದು ದೂರು ನೀಡುತ್ತಾರೆ. ಈ ಕೇಸ್ನ ಕೈಗೆತ್ತಿಕೊಳ್ಳೋದು ಪ್ರಜ್ವಲ್ ದೇವರಾಜ್. ಅವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಟೀಸರ್ನ ಉದ್ದಕ್ಕೂ ಸಸ್ಪೆನ್ಸ್ ಅಂಶ ಇದೆ. ಕಾಣೆಯಾದವರ ಹುಡುಕುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದರ ಜೊತೆಗೆ ಒಂದಷ್ಟು ಥ್ರಿಲ್ಲಿಂಗ್ ಅಂಶ ಸೇರಿಸಲಾಗಿದೆ ಎಂದು ಸಿನಿಮಾದ ಬಗ್ಗೆ ಒಂದಿಷ್ಟು ಕಥೆಯನ್ನು ಮೇಘನಾ ರಾಜ್ ಹೇಳಿಕೊಂಡಿದ್ದಾರೆ.
ಮೇಘನಾ ಗೆಳೆಯ ಪನ್ನಗ ಭರಣ ‘ತತ್ಸಮ ತದ್ಭವ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರಂತೆ. ಸ್ಫೂರ್ತಿ ಅನಿಲ್ ಪನ್ನಗ ಭರಣ ಜೊತೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ವಿಶಾಲ್ ಆತ್ರೇಯ ಅವರ ನಿರ್ದೇಶನ ಇದಕ್ಕಿದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ಸೇರಿ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಟ್ಟಿನಲ್ಲಿ ಅಭಿಮಾನಿಗಳಂತೂ ಮೇಘನಾ ರಾಜ್ ಅವರನ್ನು ತೆರೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದಾರೆ