ಈ ದಿನದ ಪ್ರಮುಖ ಸುದ್ದಿಗಳು: ಕ್ವಿಕ್ ರೌಂಡ್ ಅಪ್
ರಾಜ್ಯ ಸುದ್ದಿ
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಂಚಭೂತಗಳಲ್ಲಿ ಲೀನ
ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ನಲ್ಲಿ ನೆರವೇರಿಸಲಾಗಿದ್ದು, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಹರಿಶ್ಚಂದ್ರಘಾಟ್ನಲ್ಲಿ ಈಡಿಗ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆದಿದ್ದು, ಪತಿ ವಿಜಯ್ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ರಾಷ್ಟ್ರೀಯ ಸುದ್ದಿ
ರಾಹುಲ್ ಗಾಂಧಿ ಅವರ ʼಫ್ಲೈಯಿಂಗ್ ಕಿಸ್ʼ ಬಗ್ಗೆ ಆಕ್ಷೇಪಿಸಿದ ಸಂಸದೆ ಸ್ಮೃತಿ ಇರಾನಿ
ಲೋಕಸಭೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಅವರ ‘ಫ್ಲೈಯಿಂಗ್ ಕಿಸ್’ಗೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವರ ವರ್ತನೆಯನ್ನು ನಾನು ಆಕ್ಷೇಪಿಸುತ್ತೇನೆ. ನನಗಿಂತ ಮುಂಚೆ ಮಾತನಾಡಿದ ವ್ಯಕ್ತಿ, ಹೊರಡುವ ಮುನ್ನ ಅಸಭ್ಯತೆಯನ್ನು ಪ್ರದರ್ಶಿಸಿದರು. ಸ್ತ್ರೀದ್ವೇಷಿ ಪುರುಷನೊಬ್ಬನಿಂದ ಮಾತ್ರ ಮಹಿಳೆಯರು ಹಾಜರಿರುವ ಸದನಕ್ಕೆ ಫ್ಲೈಯಿಂಗ್ ಕಿಸ್ ಮಾಡಲು ಸಾಧ್ಯ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿ
ಭಾರತೀಯ ವಿದ್ಯಾರ್ಥಿಗಳಿಗೆ 5 ವರ್ಷಗಳ ಷೆಂಗೆನ್ ವೀಸಾ ನೀಡಲು ಮುಂದಾದ ಫ್ರಾನ್ಸ್
ವಿದ್ಯಾರ್ಜನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತೀಯ ವಿದ್ಯಾರ್ಥಿಗಳಿಗೆ 5 ವರ್ಷಗಳ ಷೆಂಗೆನ್ ವೀಸಾ ನೀಡಲಾಗುತ್ತದೆ ಎಂದು ಫ್ರಾನ್ಸ್ ಘೋಷಣೆ ಮಾಡಿದೆ.
ಈ ಬಗ್ಗೆ ಭಾರತದಲ್ಲಿರುವ ಫ್ರಾನ್ಸ್ ರಾಯಭಾರಿ ಎಮ್ಯಾನುಯೆಲ್ ಲೆನೈನ್ ಮಾಹಿತಿ ನೀಡಿದ್ದು, ಫ್ರಾನ್ಸ್ನಲ್ಲಿ ವ್ಯಾಸಂಗ ಮಾಡುವಂತೆ ಉತ್ತೇಜಿಸುವ ಉದ್ದೇಶದಿಂದ ಭಾರತೀಯ ವಿದ್ಯಾರ್ಥಿಗಳಿಗೆ ಫ್ರಾನ್ಸ್ ಸರ್ಕಾರ ಐದು ವರ್ಷಗಳ ಷೆಂಗೆನ್ ವೀಸಾವನ್ನು ನೀಡುತ್ತಿದೆ.
ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕಿಂತ ಹೆಚ್ಚಿನದನ್ನು ಹೊಂದಿರುವ ಮತ್ತು ಕನಿಷ್ಠ ಒಂದು ಸೆಮಿಸ್ಟರ್ನಲ್ಲಿ ಅಧ್ಯಯನ ಮಾಡಿದ ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್ 5 ವರ್ಷಗಳ ಅಲ್ಪಾವಧಿಯ ಷೆಂಗೆನ್ ವೀಸಾಕ್ಕೆ ಅರ್ಹವಾಗಲಿದ್ದಾರೆ ಎಂದು ತಿಳಿಸಿದೆ.
ಕ್ರೈಮ್ ಸುದ್ದಿ
ಎಂಡಿಎಂಎ ಮಾದಕ ವಸ್ತು ಹೊಂದಿದ್ದ ಆರೋಪಿ ಬಂಧನ
ಉಳ್ಳಾಲ ತಾಲೂಕಿನ ತಲಪಾಡಿಯ ಕೆ ಸಿ ರೋಡ್ ಪರಿಸರದಲ್ಲಿ ಮಾದಕ ವಸ್ತು ಮಾರಾಟಕ್ಕೆ ಆರೋಪಿ ಯತ್ನ ಮಾಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡು ಉಪ್ಪಳದ ಮೊಹಮ್ಮದ್ ರಫೀಕ್(40) ಬಂಧಿತ ಆರೋಪಿಯಾಗಿದ್ದಾನೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಮಂಗಳೂರು ದುಬೈ ಮಾರ್ಕೆಟ್ ನಲ್ಲಿ ನೈತಿಕ ಪೊಲೀಸ್ ಗಿರಿ, ಮಾಲೀಕನನ್ನೇ ಥಳಿಸಿ ಪರಾರಿ
ಸ್ವಲ್ಪ ದಿನ ತಣ್ಣಗಾಗಿದ್ದ ನೈತಿಕ ಪೊಲೀಸ್ ಗಿರಿ ಮತ್ತೆ ಬಾಲ ಬಿಚ್ಚಿದೆ. ಮಂಗಳೂರು ನಗರದ ಹೃದಯ ಭಾಗದ ಸೆಂಟ್ರಲ್ ಮಾರ್ಕೆಟ್ ಬಳಿ ದುಬೈ ಮಾರ್ಕೆಟ್ ಮಳಿಗೆ ಕಾರ್ಯಾಚರಿಸುತ್ತಿದೆ.
ಅಲ್ಲಿ ಮೊಬೈಲ್ ಮಳಿಗೆಯಲ್ಲಿ ಪವರ್ ಬ್ಯಾಂಕ್ ರಿಪೇರಿ ಮಾಡುವುದಿಲ್ಲ ಎಂದು ತಿಳಿದು ಗ್ರಾಹಕ ಅಂಗಡಿ ಮಾಲೀಕನಿಗೆ ಥಳಿಸಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಪಟ್ಟ ಇಬ್ಬರನ್ನ ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ
ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಸೆರೆ: ಸಿಸಿಬಿ ಕಾರ್ಯಾಚರಣೆ
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಬಂಧಿತನನ್ನು ಮಂಗಳೂರು ಮೆನ್ನಬೆಟ್ಟು ಗ್ರಾಮದ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ
ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಮಗು ಸಾವು
ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ತಾಲೂಕು ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.
ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಒಂದೂವರೆ ತಿಂಗಳ ಹೆಣ್ಣು ಮಗು ಅಂಶಿಕಾ ಮೃತಪಟ್ಟಿದ್ದಾರೆ.
ಕಫ ಅಗಿತ್ತು ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಯವರು ಆರೋಪಿಸಿದ್ದಾರೆ.