ಪಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಎಡ್ ವಿದ್ಯಾರ್ಹತೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ಸರ್ಕಾರದ ಈ ತೀರ್ಮಾನ ಅತಾರ್ಕಿಕ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ.
ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಎಡ್. ಅನ್ನು ಅರ್ಹತೆಯಾಗಿ ನಿಗದಿ ಮಾಡಬೇಕು ಎಂದು ಎನ್ಸಿಟಿಇ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ. ಬಿ.ಎಡ್. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ‘ಉನ್ನತ ಅರ್ಹತೆ’ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್ ಹೇಳಿದೆ.
ಬಿ.ಇಡಿ ಆಗಿರಬೇಕೆಂಬ ಅರ್ಹತೆಯನ್ನು ಸರ್ಕಾರ ನಿಗದಿ ಮಾಡಿರುವುದೇ ಸಂವಿಧಾನ ಮತ್ತು ಕಾನೂನಿನ ಉಲ್ಲಂಘನೆ, ಬಿ.ಎಡ್ ವಿದ್ಯಾರ್ಹತೆ ನಿಗದಿಗೆ ಸರ್ಕಾರ ನೀಡಿರುವ ಏಕೈಕ ಸಮರ್ಥನೆಯೆಂದರೆ ಅದು ಉನ್ನತ ಅರ್ಹತೆ ಎಂಬು ದಾಗಿದೆ.
ಇದು ನೀತಿಗೆ ಸಂಬಂಧಿಸಿದ ನಿರ್ಧಾರವೆಂದು ಪರಿಗಣಿಸಿದರೂ ಪ್ರಾಥಮಿಕ ಶಾಲಾ ಹಂತಕ್ಕೆ ಸಮರ್ಪಕ ಎನಿಸುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ರೂಪಿತವಾಗಿರುವ ಶಿಕ್ಷಣ ಹಕ್ಕು ಕಾಯ್ದೆಗೂ ಶಿಕ್ಷಕರು ಬಿ.ಎಡ್ ಪದವಿಗಳಿಸಿರಬೇಕು ಎಂಬುದಕ್ಕೂ ಸಂಬಂಧವಿಲ್ಲ ಮತ್ತು ಪ್ರಾಥಮಿಕ ತರಗತಿಯ ಬೋಧನೆಗೆ ಬಿ.ಎಡ್ ವಿದ್ಯಾರ್ಹತೆ ಅವಶ್ಯಕತೆಯೂ ಇಲ್ಲವವೆಂದು ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ‘ವಿದ್ಯಾರ್ಹತೆ ಇರುವವರು ಆಯ್ಕೆ ಆಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ (ಎನ್ಸಿಟಿಇ) ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ’ ಎಂದು ಹೇಳಿದೆ.