ಮಂಗಳೂರು: ಸಿದ್ದರಾಮಯ್ಯನವರು ಕಳೆದು ಹೋಗಿದ್ದಾರೆ. ಹಳೆ ಸಿದ್ದರಾಮಯ್ಯನವರು ಇಲ್ಲ. ನಾನು ಅವರ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ ಆ ಸಿದ್ದರಾಮಯ್ಯನವರು ಇವತ್ತು ಇಲ್ಲ ಎಂದು ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮಂಗಳೂರಿಗೆ ಭೇಟಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣ ವಿಚಾರದ ಪ್ರತಿಕ್ರಿಯೆ ನೀಡಿದ್ದಾರೆ.
ಇವತ್ತು ಇರುವ ಸಿದ್ದರಾಮಯ್ಯನವರು ನನಗೂ ಒಂದು ರೀತಿ ಅನುಮಾನ ಆಗಿದೆ.ವಾಸ್ತವಾಂಶ ಯಾರು ಏನು ಮುಚ್ಚಿ ಹಾಕೋಕೆ ಆಗಲ್ಲ.ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿಯುತ್ತೆ ಎಂದು ಯಾರು ಅರ್ಥ ಮಾಡಿಕೊಳ್ಳಲ್ಲ.ಅವರು ಅರ್ಥ ಮಾಡಿಕೊಳ್ಳಬೇಕು. ಬೇರೆಯವರ ಬಗ್ಗೆ ಹೇಗೆ ನಡೆದುಕೊಂಡ್ರು ಏನಾಯಿತು ಅನ್ನೊದಕ್ಕಿಂತ ಸಿದ್ದರಾಮಯ್ಯನವರು ಇವರೇನಾ ಎಂಬ ಸಂಶಯ ಆಗ್ತಿದೆ. ಅದನ್ನು ಅವರು ತಿದ್ದಿಕೊಂಡು ಜನರಿಗೆ ವಾಸ್ತವಾಂಶ ಏನೆಂದು ತಿಳಿಸಲಿ. ಆಗ ಅವರು ಹಳೆ ಸಿದ್ದರಾಮಯ್ಯ ಆಗ್ತಾರೆ ಎಂದು ಹೇಳಿದರು.
ಉತ್ತರಕನ್ನಡದ ಶಿರೂರು ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿತ, ರೈಲ್ವೆ ಮಾರ್ಗಗಳ ಮೇಲೂ ಗುಡ್ಡ ಕುಸಿತದ ಆತಂಕ ವಿಚಾರ ಈ ಬಗ್ಗೆ ರೈಲ್ವೆ ಇಲಾಖೆಯಿಂದ ನಮ್ಮದೆ ಆದ ವ್ಯವಸ್ಥೆಯಲ್ಲಿ ಪಾಕೃತಿಕ ವಿಕೋಪ ನಿರ್ವಹಣೆ ಮಾಡ್ತೇವೆ. NDRF, SDRF ಯಾವ ರೀತಿ ಇದೆಯೋ ಅದಕ್ಕಿಂತ ವಿಭಿನ್ನವಾಗಿ ನಮ್ಮ ಇಲಾಖೆಯಲ್ಲಿ ವ್ಯವಸ್ಥೆಗಳಿವೆ.ಇದಕ್ಕಾಗಿ ವಾರ್ ರೂಂ ಮಾಡಿದ್ದೇವೆ.
ಪ್ರತಿಯೊಂದು ಕಡೆಗಳಲ್ಲೂ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ.ಈ ಸಾರಿ ಮಳೆ ತುಂಬಾ ಜಾಸ್ತಿ ಆಗ್ತಿದೆ.ಜಿಲ್ಲಾಧಿಕಾರಿಗಳ ಜೊತೆ ನಮ್ಮವರು ಸಹ ಕೈಜೋಡಿಸಿ ತಕ್ಷಣ ಸಮರೋಪಾದಿ ಕೆಲಸ ನಡೆಯುತ್ತೆ.ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಬೇಕಾಗಿದೆ.ಈ ಬಗ್ಗೆ ಕೇಂದ್ರ ರೈಲ್ವೆ ಮಂತ್ರಿಗಳ ಜೊತೆ ಚರ್ಚೆ ಮಾಡ್ತೇನೆ.
ಎಂತಹ ಮಳೆ ಬಂದರು ನಮ್ಮ ರೈಲು ನಿಲ್ಲಬಾರದು. ಗೂಡ್ಸ್, ಪ್ಯಾಸೆಂಜರ್ ರೈಲು ನಿಲ್ಲಬಾರದು.ಆದ್ರೆ ಇಡೀ ದೇಶದಲ್ಲಿ ಸಮಾರೋಪಾದಿಯಲ್ಲಿ ಕೆಲಸ ಆಗ್ತಿದೆ.ಮಂಗಳೂರು ಅಷ್ಟೊಂದು ಸಮಧಾನವಿಲ್ಲ.ಇಲ್ಲಿಯು ಸಹ ಆ ಕೆಲಸ ಮಾಡಲು ಸಭೆ ಮಾಡುತ್ತೇವೆ.ನಾಲ್ಕೈದು ತಿಂಗಳಲ್ಲಿ ಸಾಕಷ್ಟು ಬದಲಾವಣೆ ಮಾಡುತ್ತೇವೆ ಎಂದು ಹೇಳಿದರು.
ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಫ್ಲ್ಯಾಟ್ ಫಾರಂ, ವಿಶ್ರಾಂತಿ ಕೊಠಡಿ, ಕ್ಯಾಂಟೀನ್ ಸ್ಥಳಗಳ ಪರಿಶೀಲನೆ ನಡೆಸಿದರು.ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಸೋಮಣ್ಣ.
ಸಚಿವರಿಗೆ ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಸಾಥ್ ನೀಡಿದರು.