ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಆಡಿಯೋ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆಯ ಕುರಿತ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಆಡಿಯೋ ತಿರುಚಲಾಗಿದೆಯೇ ಎಂದು ನೋಡಬೇಕು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುವುದು ಎಂದರು.
ಬಿ.ಎಲ್ ಸಂತೋಷ ಲಿಂಗಾಯತ ಮತಗಳ ಅಗತ್ಯವಿಲ್ಲ ಎಂದಿರುವುದು ಸುಳ್ಳು ಸುದ್ದಿ ಎಂದು ಮುಖ್ಯ ಮಂತ್ರಿಗಳು ಈಗಾಗಲೇ ಈ ಬಗ್ಗೆ ದೂರು ಸಹ ದಾಖಲು ಮಾಡಲಾಗಿದೆ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನು ಬೇಕಾದರೂ ಪಠಣ ಮಾಡಲಿ ಎಂದರು.
ಶಿವರಾಜ್ ಕುಮಾರ್ ಮೇಲೆ ಬಿಜೆಪಿ ಟ್ರೋಲ್ ಮಾಡಿರುವ ಬಗ್ಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಯಾವ ನಟರು ಕೂಡ ಯಾವ ಪಕ್ಷ ಪರವಾಗಿ ಪ್ರಚಾರ ಮಾಡಬಹುದು. ಪ್ರತಾಪ್ ಸಿಂಹ ಮತ್ತು ಶಿವರಾಜ್ ಕುಮಾರ್ ಟೀಕೆ ಅವರಿಗೆ ಬಿಟ್ಟ ವಿಚಾರ. ಶಿವರಾಜ್ ಕುಮಾರ್ ಪ್ರಚಾರದ ಬಗ್ಗೆ ನನಗೇನು ಅಭ್ಯಂತರ ಇಲ್ಲ ಎಂದರು.
ಇಂದು ಪ್ರಧಾನಿ ಮೋದಿ ಹಾವೇರಿಗೆ ಬರುತ್ತಿದ್ದು, ಮೊದಲಿಗಿಂತಲೂ ಈಗ ಮೋದಿ ಅಲೆ ಜಾಸ್ತಿಯಾಗಲಿದೆ ಎಂದು ಹೇಳಿದರು.