ರಾಜ್ಯ, ದೇಶದಲ್ಲಿ ಏನಾಗ್ತಿದೆ? ಇಲ್ಲಿದೆ ಪ್ರಮುಖ ಸುದ್ದಿಗಳ ಕ್ವಿಕ್ ರೌಂಡ್ ಅಪ್
ವಿಪಕ್ಷಗಳ ಬೃಹತ್ ಸಭೆ: ಬಿಜೆಪಿಯನ್ನು ಸೋಲಿಸಲು ಭಾರಿ ರಣತಂತ್ರ
ಬಿಹಾರದ ಪಟ್ನಾದಲ್ಲಿ ವಿಪಕ್ಷಗಳ ಬೃಹತ್ ಸಭೆ ನಡೆಯುತ್ತಿದ್ದು, ಎಲ್ಲಾ ಪಕ್ಷಗಳು ಒಟ್ಟಾಗಿ ಸೇರಿ ಬಿಜೆಪಿಯನ್ನು ಸೋಲಿಸೋಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ನಾಯಕರು ರಾಜ್ಯದ ಮೂಲೆ ಮೂಲೆಗೆ ಹೋಗಿ ಪ್ರಚಾರ ಮಾಡಿದ್ದು ನೋಡಿದ್ದೇವೆ. ಬಿಜೆಪಿ ಹಿಂದೂಸ್ಥಾನವನ್ನು ಒಡೆಯುವ ಕೆಲಸ ಮಾಡುತ್ತಿದೆ. ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಒಟ್ಟಿಗೆ ನಿಂತ ಕಾರಣ ಬಿಜೆಪಿ ಕಣ್ಮರೆಯಾಗಿದೆ. ಇನ್ನು ಅದೇ ರೀತಿ ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲೂ ಕೂಡ ಬಿಜೆಪಿ ಕಾಣಿಸುವುದಿಲ್ಲ ಮತ್ತು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.
2024ರ ವುನಾವಣೆಯಲ್ಲಿ ನಾವೆಲ್ಲಾ ವಿರೋಧ ಪಕ್ಷಗಳು ಒಟಾಗಿ ಹೋರಾಡಬೇಕಿದೆ. ಎಲ್ಲಾ ಪಕ್ಷದ ಮುಖಂಡರು ಮಾತನಾಡಿ ಒಟ್ಟಾಗಿ ಮುಂದಿನ ಹೆಜ್ಜೆ ಇಡಲಿದ್ದೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಒಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬಿಹಾರದಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಕಾರ್ಯತಂತ್ರ ರೂಪಿಸಲು 15ಕ್ಕೂ ಹೆಚ್ಚು ವಿಪಕ್ಷಗಳು ಒಟ್ಟಿಗೆ ಸೇರಿ ಸಭೆ ನಡೆಸುತ್ತಿವೆ.
ಏಕದಿನ ಟೆಸ್ಟ್ ಗೆ ಟೀಂ ಇಂಡಿಯಾ ರೆಡಿ: ತಂಡದಲ್ಲಿ ಯಾರೆಲ್ಲಾ ಇದ್ದಾರೆ ನೋಡಿ
ವಿಂಡೀಸ್ ವಿರುದ್ದದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟಗೊಂಡಿದೆ. ಈ ಟೆಸ್ಟ್ ಸರಣಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುನ್ನಡೆಯಲಿದ್ದು, ಅಜಿಂಕ್ಯ ರಹಾನೆಗೆ ಉಪನಾಯಕನ ಪಟ್ಟ ನೀಡಲಾಗಿದೆ.
ಈ ಪ್ರವಾಸದಲ್ಲಿ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಜು.12ರಂದು ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು, ಜು.20ರಂದು ಪೋರ್ಟ್ ಆರ್ಫ್ ಸ್ಪೇನ್ ನಲ್ಲಿ ನಡೆಯಲಿದೆ.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೋಗ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲ್ಲಿಕ್, ಮುಖೇಶ್ ಕುಮಾರ್.
ಟೆಸ್ಟ್ ಸರಣಿಗೆ ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೋಹ್ಲಿ, ಯಶಸ್ವಿ ಜೈಸ್ವಾಲ್, ಕೆ.ಎಸ್. ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಯದೇವ್ ಉನಾದ್ಕತ್, ನವದೀಪ್ ಸೈನಿ.
ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ
ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು.
ಸಭೆಯ ಬಳಿಕ ಸಚಿವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡುವಾಗ ಹೀಗೆ ತಿಳಿಸಿದರು ಇಂದು ಕೇಂದ್ರ ಜವಳಿಯ ಸಕ್ಕರೆ ಮತ್ತು ಕೃಷಿ ಸಚಿವರಾದ ಪಿಯೂಷ್ ಗೋಯಲ್ ರವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರದ ಅನ್ಯ ಭಾಗ್ಯ ಯೋಜನೆಗೆ ಅಕ್ಕಿಯನ್ನು ನೀಡಲು ಮನವಿ ಮಾಡಿದವು.
ಆದರೆ ಕೇಂದ್ರ ಸಚಿವರು 300 ಲಕ್ಷ ಟನ್ ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುತ್ತಾರೆ.
ಆದರೆ ರಾಜ್ಯ ಸರ್ಕಾರವು ಅನ್ನಭಾಗ್ಯದ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತದೆ ಎಂದು ಕೆ ಎಚ್ ಮುನಿಯಪ್ಪ ರವರು ತಿಳಿಸಿದರು.
ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ
ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದನ್ನು ಮನವರಿಕೆ ಮಾಡಿಸಿದರು.
ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆ.ಇ. ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದು ವಿವರಿಸಿದರು.
ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್.ಟಿ ಕೈಗಾರಿಕೆಗಳ ಮೇಲೆ ವಿಧಿಸುವ ಶೇ 9 ರಷ್ಟು ವಿದ್ಯುತ್ ತೆರಿಗೆಯನ್ನು ಶೇ 3 ರಷ್ಟು ಇಳಿಸಬೇಕು ಎಂದು ಮನವಿ ಮಾಡಿದರು.
ಇಂಧನ ಶುಲ್ಕ (Fuel Escalation charges) ನಲ್ಲಿ ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂ.ಎಸ್.ಎಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡುವಂತೆ ಮನವಿ ಮಾಡಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಎಫ್.ಕೆ.ಸಿ.ಸಿ.ಐ ಪದಾಧಿಕಾರಿಗಳಾದ ರಮೇಶ್ ಚಂದ್ರ ಲಾಹೋಟಿ, ಎಂ.ಜಿ.ಬಾಲಕೃಷ್ಣ , ಡಾ. ಪ್ರಸಾದ್, ಬಿ.ಟಿ. ಮನೋಹರ್ ಉಪಸ್ಥಿತರಿದ್ದರು.