ತಮಿಳಿನ ಖ್ಯಾತ ನಟ ಧನುಷ್ ಇಂದು ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಕಾಣಿಸಿಕೊಂಡರು. ತಿಮ್ಮಪ್ಪನಿಗೆ ಮುಡಿ ಕೊಡುವ ಮೂಲಕ ಹರಕೆ ತೀರಿಸಿಕೊಂಡಿದ್ದಾರೆ. ಬೆಳ್ಳಂ ಬೆಳಗ್ಗೆ ತಿರುಪತಿಗೆ ಆಗಮಿಸಿದ್ದ ಧನುಷ್, ಮುಡಿ ಕೊಟ್ಟು ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಧನುಷ್ ಮಾತ್ರವಲ್ಲ ಅವರ ಮಕ್ಕಳಾದ ಯಾತ್ರಾ ಮತ್ತು ಲಿಂಗ ಕೂಡ ಮುಡಿ ನೀಡಿದ್ದಾರೆ.
ಸಾಮಾನ್ಯರಂತೆ ಸರದಿ ಸಾಲಿನಲ್ಲಿ ಮಕ್ಕಳೊಂದಿಗೆ ನಿಂತು ತಿಮ್ಮಪ್ಪನ ದರ್ಶನ ಮಾಡಿದ ಧನುಷ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಮಕ್ಕಳೊಂದಿಗೆ ಮುಡಿಕೊಟ್ಟು ಸಾಮಾನ್ಯ ಭಕ್ತರಂತೆ ನಡೆದುಕೊಂಡ ರೀತಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಲ್ಲದೇ, ಧನುಷ್ ಬಗ್ಗೆ ಅನೇಕರು ಮೆಚ್ಚುಗೆಯಿಂದ ಮಾತನಾಡುತ್ತಿದ್ದಾರೆ.
ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕಾಗಿ ಧನುಷ್ ಉದ್ದನೆಯ ಕೂದಲು ಬೆಳೆಸಿದ್ದರು. ಇದೀಗ ಸಿನಿಮಾದ ಕಂಪ್ಲೀಟ್ ಶೂಟಿಂಗ್ ಮುಗಿದಿದೆ. ಮೊನ್ನೆಯಷ್ಟೇ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ಫಸ್ಟ್ ಲುಕ್ ಗೆ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಈ ಸಿನಿಮಾದಲ್ಲಿ ಧನುಷ್ ಅಪರೂಪದ ಪಾತ್ರವನ್ನು ಮಾಡಿದ್ದಾರೆ