ಮಂಗಳೂರು: ಹಿಂದೂ ಕಾರ್ಯಕರ್ತರ ವಿರುದ್ದ ಗಡಿಪಾರು ಅಸ್ತ್ರವನ್ನು ಉಪಯೋಗಿಸಿ ಮಂಗಳೂರು ನಗರದಲ್ಲಿ ಕೋಮುಗಲಭೆಯನ್ನು ಹುಟ್ಟುಹಾಕುತ್ತಿರುವ ಹಾಗೂ ನೈತಿಕ ಪೋಲಿಸ್ಗಿರಿ ನಡೆಸುವವರ ವಿರುದ್ಧ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಇತ್ತೀಚೆಗೆ ನಡೆದ ಎರಡು ಪ್ರತ್ಯೇಕ ಕೇಸ್ ನಲ್ಲಿ ಭಾಗಿಯಾಗಿದ್ದ ಮೂವರು, ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನಡೆಸಿದ ನೈತಿಕ ಪೊಲೀಸ್ ಗಿರಿ ಮತ್ತು ಸ್ಥಳೀಯ ಠಾಣೆಗಳ ಇನ್ಸ್ಪೆಕ್ಟರ್ ಗಳಿಂದ ಗಡಿಪಾರಿಗೆ ವರದಿಯನ್ನು ಪಡೆದಿದ್ದ ಡಿಸಿಪಿ ಸ್ಥಳೀಯ ಠಾಣೆ ಪೊಲೀಸರು ಹಾಗೂ ಆ್ಯಂಟಿ ಕಮ್ಯುನಲ್ ವಿಂಗ್ ಅಧಿಕೃತವಾಗಿ ಕಾನೂನು ಪ್ರಕಾರ ಗಡಿಪಾರು ಅಸ್ತ್ರ ಪ್ರಯೋಗ ಮಾಡಿದ್ದಾರೆ, ಮತ್ತು ಸಾಮಾನ್ಯ ಪ್ರಕ್ರಿಯೆಯಾಗಿದ್ದು ಇದಕ್ಕೂ ಮೊದಲು ಸುಮಾರು 60ಕ್ಕೂ ಹೆಚ್ಚು ಜನರನ್ನು ಈ ಕ್ರಮದ ಅಡಿಯಲ್ಲಿ ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದ್ಧಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆಯಂತೆ ಈ ವಿಂಗ್ ಭಜರಂಗದಳ ಹಾಗೂ ವಿಎಚ್ ಪಿ ಕಾರ್ಯಕರ್ತರ ಮೇಲೆ ಕಣ್ಣಿಟ್ಟಿತ್ತು. ಈ ವಿಂಗ್ ಅಸ್ತಿತ್ವಕ್ಕೆ ಬಂದಿದ್ದ ಈ ತಂಡ ನೈತಿಕ ಪೊಲೀಸ್ಗಿರಿ ಆರೋಪಿತರಗಳ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾ ಇಟ್ಟಿದ್ದು ಇದೀಗ ನೋಟೀಸ್ ನೀಡಿ ಗಡಿಪಾರಿಗೆ ಆದೇಶ ನೀಡಿದ್ದಾರೆ.
ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ಮಾತನಾಡಿ, ಗೂಂಡಾ ಕಾಯ್ದೆ ಪ್ರಕಾರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ರೌಡಿ ಶೀಟರ್ಗಳು ತೊಡಗಿರುವುದು ಸಾಮಾನ್ಯವಾಗಿದೆ. ಅದರಂತೆ ಗಡಿಪಾರು ಮಾಡುವ ಈ ಕ್ರಮವು ಸಹ ಸಾಮಾನ್ಯವಾದ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆಗೆ ಕಾರಣವೆನೆಂದು ಕೇಳಿ ನೋಟಿಸ್ ನೀಡಿದ್ದು, ಜುಲೈ 21ರಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರಿಗೆ ಸಿದ್ದತೆ ನಡೆಸಿದ್ದು ಸದ್ಯ ನೋಟಿಸ್ ವಿರುದ್ದ ಕಾನೂನು ಹೋರಾಟಕ್ಕೆ ಭಜರಂಗದಳ ಯೋಜನೆಯನ್ನು ರೂಪಿಸಿದ್ದು, ಡಿಸಿಪಿ ಎದುರು ಹಾಜರಾಗುವ ಮೊದಲೇ ಕಾನೂನು ಹೋರಾಟಕ್ಕೆ ಚಿಂತನೆ ನಡೆಸಿದ್ದಾರೆ.