ಅಕ್ಟೋಬರ್ನಲ್ಲಿ ನಡೆಯಲಿರುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿದ್ಧತೆ ಪ್ರಾರಂಭವಾಗಿದ್ದು, 14 ಆನೆಗಳನ್ನ ದಸರಾಗೆ ಕರೆತರಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ. ಇನ್ನು ಈ ಬಾರಿ ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಕಳೆದ ಬಾರಿ ಗರ್ಭಿಣಿ ಆನೆಯನ್ನು ತಾಲೀಮಿಗೆ ಬಳಸಿ ಅರಣ್ಯ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ದಸರಾ ನಂತರ ಆನೆ ಲಕ್ಷ್ಮೀ ರಾಮಾಪುರ ಕ್ಯಾಂಪ್ ನಲ್ಲಿ ಗಂಡು ಮರಿಗೆ ಜನ್ಮ ನೀಡಿತ್ತು. ಹೀಗಾಗಿ ಈ ಬಾರಿ ಎಚ್ಚೆತ್ತ ಅರಣ್ಯ ಇಲಾಖೆ ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಮುಂದಾಗಿದೆ. ಆನೆ ಕ್ಯಾಂಪ್ನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಆದ ಬಳಿಕ ದಸರಾಗೆ ಹೆಣ್ಣಾನೆಗಳು ಆಗಮಿಸಲಿವೆ.
ಅರ್ಜುನನ ಅನುಪಸ್ಥಿತಿ:
ಈ ಬಾರಿ ಅರ್ಜುನ ಆನೆ ದಸರಾದಲ್ಲಿ ಭಾಗಿಯಾಗುವುದಿಲ್ಲ. ಅರ್ಜುನ ಆನೆಗೆ ವಯಸ್ಸಾದ ಕಾರಣ ದಸರಾ ಹಬ್ಬದಿಂದ ಕೈಬಿಡಲಾಗಿದೆ. ಹಾಗೆಯೇ ಇಷ್ಟು ವರ್ಷ ದಸರಾದಲ್ಲಿ ಭಾಗಿಯಾಗುತ್ತಿದ್ದ ಗೋಪಾಲಸ್ವಾಮಿ ಆನೆಯು ಕಾಡಾನೆ ದಾಳಿಯಿಂದ ಮೃತಪಟ್ಟಿದೆ. ಆದರಿಂದ ಅರ್ಜುನ ಮತ್ತು ಗೋಪಾಲಸ್ವಾಮಿ ಆನೆಯ ಅನುಪಸ್ಥಿತಿಯಲ್ಲಿ ಈ ಬಾರಿ ದಸರಾ ನಡೆಯಲಿದೆ. 14 ಆನೆಗಳನ್ನ ದಸರಾಗೆ ಕರೆತರಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ. ಇನ್ನು ಕ್ಯಾಂಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈ ಬಾರಿ ದಸರಾ ಜಂಬೂಸವಾರಿ ನಡೆಯಲಿದೆ.